Webdunia - Bharat's app for daily news and videos

Install App

ಆರು ತಿಂಗಳಿನಿಂದ ಕುಂಬ್ಳೆ-ಕೊಹ್ಲಿ ನಡುವೆ ಮಾತಿಲ್ಲ ಕತೆಯಿಲ್ಲ!

Webdunia
ಗುರುವಾರ, 22 ಜೂನ್ 2017 (09:11 IST)
ಮುಂಬೈ: ಕಳೆದ ಆರು ತಿಂಗಳಿನಿಂದ ಕೊಹ್ಲಿ ಮತ್ತು ಕುಂಬ್ಳೆ ನಡುವೆ ಮಾತುಕತೆಯೇ ಇರಲಿಲ್ಲ ಎಂದು ಬಿಸಿಸಿಐ ಮೂಲಗಳು ಸ್ಪಷ್ಟಪಡಿಸಿವೆ.

 
ಲಂಡನ್ ನಲ್ಲಿ ಹೋಟೆಲ್ ನಲ್ಲಿ ಇಬ್ಬರ ನಡುವೆ ಸಂಧಾನ ನಡೆಸಲು ಬಿಸಿಸಿಐ ಪ್ರಯತ್ನಸಿತ್ತು. ಇಬ್ಬರನ್ನೂ ಪ್ರತ್ಯೇಕವಾಗಿ ಕರೆಸಿಕೊಂಡು ವಿಚಾರಿಸಿಕೊಂಡ ಮೇಲೆ ಜತೆಯಾಗಿ ಕೂರಿಸಿ ಕ್ರಿಕೆಟ್ ಸಲಹಾ ಸಮಿತಿ ಪ್ರಯತ್ನಿಸಿತ್ತು.

ಈ ಸಂದರ್ಭದಲ್ಲಿ ಇಬ್ಬರೂ ಪರಸ್ಪರ ಸಂವಹನ ನಡೆಸಲಿಲ್ಲ. ಕುಂಬ್ಳೆ ಬಳಿ ಸಮಸ್ಯೆಯೇನೆಂದು ಕೇಳಿದಾಗ ನನಗೆ ವಿರಾಟ್ ಜತೆ ಯಾವುದೇ ಸಮಸ್ಯೆ ಇಲ್ಲ ಎಂದಿದ್ದರು. ಆದರೆ ವಿರಾಟ್ ಕೋಚ್ ಕುಂಬ್ಳೆ ನಾಯಕನಾದ ನನ್ನ ಅಧಿಕಾರ ವ್ಯಾಪ್ತಿಗೆ ಬರುತ್ತಾರೆ ಎಂದು ದೂರಿದ್ದರು.

ಆದರೆ ಇದಕ್ಕೆ ಉತ್ತರಿಸಿದ್ದ ಕುಂಬ್ಳೆ ಒಬ್ಬ ನಾಯಕನಾಗಿಯೂ ಅನುಭವದ ಆಧಾರದ ಮೇಲೆ ಕೆಲವು ನಿರ್ಧಾರ ಕೈಗೊಂಡಿರಬಹುದು. ಆದರೆ ಅಂತಿಮ ನಿರ್ಧಾರ ಏನಿದ್ದರೂ ನಾಯಕನದ್ದಾಗಿತ್ತು ಎಂದಿದ್ದರು. ಅಲ್ಲದೆ ಕೊನೆಗೆ ಇಬ್ಬರೂ ಇದು ಸರಿಪಡಿಸಲಾಗದ ಹಂತಕ್ಕೆ ಹೋಗಿದೆ ಎಂದು ಮನಗಂಡರು. ಹಾಗಾಗಿಯೇ ಕುಂಬ್ಳೆ ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದರು.

ಅಸಲಿಗೆ ವೆಸ್ಟ್ ಇಂಡೀಸ್ ಪ್ರವಾಸ ಬೆಳೆಸಲು ಕುಂಬ್ಳೆ ಹಾಗೂ ಅವರ ಪತ್ನಿಗೂ ಟಿಕೆಟ್ ಬುಕ್ ಆಗಿತ್ತು. ಆದರೆ ಇದೆಲ್ಲಾ ರಗಳೆಗಳಿಂದಾಗಿ ಕುಂಬ್ಳೆ ಹಿಂದೆ ಸರಿದರು ಎಂದು ಬಿಸಿಸಿಐ ಮೂಲಗಳು ಮಾಧ್ಯಮವೊಂದಕ್ಕೆ ಹೇಳಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಸಿಸಿ ಹೊಸ ಸಿಇಓ ಆಗಿ ಭಾರತೀಯ ಸಂಜೋಗ್ ಗುಪ್ತಾ, ಇವರ ಸಾಧನೆ ಇಲ್ಲಿದೆ

ಅಭಿನಂದಿಸಲು ಸಿರಾಜ್‌ನನ್ನೇ ಕೈಬಿಟ್ಟ ಜಯ್‌ಶಾ: ಮುಸ್ಲಿಂ ಎಂಬ ಕಾರಣವೇ ಹೊಗಳಿಕೆಯಿಂದ ದೂರವಿರಲು ಕಾರಣವಾಯಿತೆ,ವಿವಾದ

IND vs ENG: ವೇಗಿ ಆಕಾಶ್ ದೀಪ್ ಕುಟುಂಬದ ಕತೆ ಕೇಳಿದ್ರೆ ಕಣ್ಣೀರೇ ಬರುತ್ತದೆ

IND vs ENG: ಮುಂದಿನ ಪಂದ್ಯಕ್ಕೆ ಈ ಇಬ್ಬರೂ ಕನ್ನಡಿಗರಿಗೆ ಗೇಟ್ ಪಾಸ್

IND vs ENG: ಗೆಲುವಿನ ಬಳಿಕ ಶುಭಮನ್ ಗಿಲ್ ಹೇಳಿದ ಒಂದು ಮಾತು ಇಂಗ್ಲೆಂಡ್ ಭಯ ಹೆಚ್ಚಿಸುತ್ತೆ

ಮುಂದಿನ ಸುದ್ದಿ
Show comments