Webdunia - Bharat's app for daily news and videos

Install App

ಜಾರ್ಖಾಂಡ್ ರಾಜ್ಯಕ್ಕೆ ಎಂ.ಎಸ್.ಧೋನಿ ಪ್ರಚಾರ ರಾಯಭಾರಿ

Webdunia
ಶುಕ್ರವಾರ, 25 ನವೆಂಬರ್ 2016 (14:11 IST)
ರಾಂಚಿ: ಟೀಂ ಇಂಡಿಯಾ ಸೀಮಿತ ಓವರ್ ಗಳ ನಾಯಕ ಎಂ.ಎಸ್. ಧೋನಿ ತಮ್ಮ ತವರು ರಾಜ್ಯ ಜಾರ್ಖಂಡ್ ನ ಪ್ರಚಾರ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ. ತಮ್ಮ ಕರ್ತವ್ಯದ ಮೊದಲ ಹೆಜ್ಜೆಯಾಗಿ ಧೋನಿ ರಾಜ್ಯದ ಮೊದಲ ಜಾಗತಿಕ ಬಂಡವಾಳ ಸಮಾವೇಶದ ಪ್ರಚಾರ ಮಾಡಲಿದ್ದಾರೆ.

ಸಮಾವೇಶ ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿದೆ. “ಈಗಾಗಲೇ ಬಂಡವಾಳ ಸಮಾವೇಶದ ಕುರಿತಾಗಿ ಮಾಹಿತಿ ನೀಡುವ ಧೋನಿಯನ್ನು ಒಳಗೊಂಡಿರುವ ಜಾಹೀರಾತು ವಿಡಿಯೋವನ್ನು ಚಿತ್ರೀಕರಿಸಿದ್ದೇವೆ. ಮುಂದಿನ ತಿಂಗಳಿನಿಂದ ಅದನ್ನು ಟಿವಿಗೆ ಬಿಡುಗಡೆ ಮಾಡಲಿದ್ದೇವೆ” ಎಂದು ರಾಜ್ಯ ಕೈಗಾರಿಕಾ ಕಾರ್ಯರ್ಶಿ ಸುನಿಲ್ ಕುಮಾರ್ ಬನ್ಸ್ವಾಲ್ ತಿಳಿಸಿದ್ದಾರೆ.

ಹಲವು ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ದಾಖಲೆ ಮಾಡಿರುವ ಧೋನಿಗೆ ಇದು ಹೊಸ ಸವಾಲಾಗಿದೆ. ತವರು ರಾಜ್ಯವನ್ನು ಜನಪ್ರಿಯಗೊಳಿಸಲು ಅವರಿಗೆ ಸಿಕ್ಕಿದ ಸದವಕಾಶ ಇದಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ–ಇಂಗ್ಲೆಂಡ್‌ ಟೆಸ್ಟ್‌: ದಾಖಲೆ ಬರೆದ ಕೆಲವೇ ಕ್ಷಣದಲ್ಲಿ ಗಾಯಗೊಂಡ ಮೈದಾನ ತೆರೆದ ರಿಷಭ್‌ ಪಂತ್‌

IND vs ENG: ಇಂಗ್ಲೆಂಡ್ ನೆಲದಲ್ಲಿ ದಾಖಲೆ ಮಾಡಿದ ಕೆಎಲ್ ರಾಹುಲ್

END vs IND Test: ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಗಿಲ್ ಪಡೆ, ತಂಡದಲ್ಲಿ ಮಹತ್ವದ ಬದಲಾವಣೆ

IND vs ENG: ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿದ ಯುವ ಬೌಲರ್ ಅಂಶುಲ್ ಕಾಂಬೋಜ್ ಯಾರು ಗೊತ್ತಾ

ತನಗೆ ಸಿಕ್ಕ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಯುವ ಆಟಗಾರ್ತಿಗೆ ನೀಡಿದ ಹರ್ಮನ್ ಪ್ರೀತ್ ಕೌರ್: ವಿಡಿಯೋ

ಮುಂದಿನ ಸುದ್ದಿ
Show comments