Publish Date: Wed, 04 Dec 2019 (09:18 IST)
Updated Date: Wed, 04 Dec 2019 (09:19 IST)
ಮುಂಬೈ: ರಾಷ್ಟ್ರೀಯ ಆಯ್ಕೆ ಸಮಿತಿ ಅವಧಿ ಮುಕ್ತಾಯಗೊಂಡಿರುವ ಹಿನ್ನಲೆಯಲ್ಲಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಬಿಸಿಸಿಐ ಕೈಗೊಳ್ಳುವ ಯಾವುದೇ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ.
ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಸೇರಿದಂತೆ ಐವರು ಸದಸ್ಯರ ಅವಧಿ ವಿಸ್ತರಣೆ ಇಲ್ಲ ಎಂದು ಈಗಾಗಲೇ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸ್ಪಷ್ಟಪಡಿಸಿದ್ದಾರೆ. ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ಕಾರ್ಯವೈಖರಿ ಬಗ್ಗೆ ಹಲವು ಮಾಜಿ ಕ್ರಿಕೆಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಎಂಎಸ್ ಕೆ ಪ್ರಸಾದ್ ನಮ್ಮ ಕಾರ್ಯವೈಖರಿ ನಮಗೆ ತೃಪ್ತಿ ತಂದಿದೆ. ನಮ್ಮ ಮೂರು ವರ್ಷದ ಅವಧಿ ಮುಕ್ತಾಯವಾಗಿದೆ. ಅವಧಿ ವಿಸ್ತರಣೆ ನಿರ್ಧಾರ ನಮ್ಮ ಕೈಯಲ್ಲಿಲ್ಲ. ಬಿಸಿಸಿಐ ಏನು ನಿರ್ಧಾರ ತೆಗೆದುಕೊಳ್ಳುತ್ತದೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ’ ಎಂದಿದ್ದಾರೆ.