Webdunia - Bharat's app for daily news and videos

Install App

ರಾಜಸ್ಥಾನದಲ್ಲೂ ಬರ, ಇಲ್ಲೇಕೆ ಐಪಿಎಲ್ ನಡೆಸ್ತೀರಿ: ಹೈಕೋರ್ಟ್ ಪ್ರಶ್ನೆ

Webdunia
ಗುರುವಾರ, 21 ಏಪ್ರಿಲ್ 2016 (13:53 IST)
ಬಿಸಿಸಿಐಯನ್ನು ನೀರಿನ ಬಿಕ್ಕಟ್ಟು ದುಃಸ್ವಪ್ನದಂತೆ ಕಾಡುತ್ತಿದ್ದು, ಐಪಿಎಲ್ ಪಂದ್ಯಗಳನ್ನು ಬರಪೀಡಿತ ರಾಜ್ಯದಲ್ಲಿ ನಡೆಯಲು ಅವಕಾಶ ನೀಡಿದ ಕ್ರಮವನ್ನು ರಾಜಸ್ಥಾನ ಹೈಕೋರ್ಟ್ ಟೀಕಿಸಿದೆ. ಕಳೆದ ವಾರ, ಬಾಂಬೆ ಹೈಕೋರ್ಟ್  ಮೇನಲ್ಲಿ ನಡೆಯುವ ಎಲ್ಲಾ ಐಪಿಎಲ್ ಪಂದ್ಯಗಳನ್ನು  ನೀರಿನ ಬಿಕ್ಕಟ್ಟು ಇರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಹೊರಗೆ ಸ್ಥಳಾಂತರಿಸುವಂತೆ ಸೂಚಿಸಿತ್ತು.
 
ಆದಾಗ್ಯೂ ಬಾಂಬೆ ಹೈಕೋರ್ಟ್ ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ಮತ್ತು ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ನಡುವೆ ಮೇ ಒಂದರಂದು ಪಂದ್ಯ ನಡೆಸಲು ಬಿಸಿಸಿಐಗೆ ಅವಕಾಶ ನೀಡಿದೆ.
 
ಆದರೆ ರಾಜಸ್ಥಾನ ಹೈಕೋರ್ಟ್ ರಾಜ್ಯಸರ್ಕಾರಕ್ಕೆ, ಬಿಸಿಸಿಐಗೆ ರಾಜ್ಯದಲ್ಲಿ ಪಂದ್ಯಗಳನ್ನು ನಡೆಸುವ ಯುಕ್ತಾಯುಕ್ತತೆ ಕುರಿತು ನೋಟಿಸ್ ನೀಡಿದೆ. ಮುಂಬೈ ಇಂಡಿಯನ್ಸ್ ಜೈಪುರದ ಸವಾಯ್ ಮಾನ್ಸಿಂಗ್ ಸ್ಟೇಡಿಯಂ ಅನ್ನು ತವರು ನೆಲವಾಗಿ ಆಯ್ಕೆ ಮಾಡಿತ್ತು.

ರಾಜ್ಯದಲ್ಲಿ ಮಹಾರಾಷ್ಟ್ರಕ್ಕಿಂತ ಬರಪರಿಸ್ಥಿತಿ ಕೆಟ್ಟದಾಗಿರುವಾಗ ರಾಜಸ್ಥಾನವೇಕೆ ಐಪಿಎಲ್ ಪಂದ್ಯಗಳಿಗೆ ಆತಿಥ್ಯ ವಹಿಸಬೇಕು ಎಂದು ಹೈಕೋರ್ಟ್ ಖಾರವಾಗಿ ಪ್ರಶ್ನಿಸಿದೆ.  ಕೋರ್ಟ್ ಮುಂದಿನ ವಾರ ಈ ವಿಷಯವನ್ನು ವಿಚಾರಣೆಗೆ ಎತ್ತಿಕೊಳ್ಳಲಿದ್ದು, ರಾಜ್ಯಸರ್ಕಾರ ಕೂಡ ಉತ್ತರ ನೀಡುವ ನಿರೀಕ್ಷೆಯಿದೆ. 

 ತಾಜಾಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments