Webdunia - Bharat's app for daily news and videos

Install App

ನಿಂಗೆ ಏನು ಗೊತ್ತಿದೆಯೋ ಅಷ್ಟು ಮಾತ್ರ ಮಾಡು! ಹೀಗಂತ ಕ್ರಿಕೆಟಿಗ ಗೌತಮ್ ಗಂಭೀರ್ ಗೆ ಎಚ್ಚರಿಕೆ ನೀಡಿದವರು ಯಾರು ಗೊತ್ತೇ?!

Webdunia
ಬುಧವಾರ, 3 ಏಪ್ರಿಲ್ 2019 (09:49 IST)
ನವದೆಹಲಿ: ಇತ್ತೀಚೆಗಷ್ಟೇ ಬಿಜೆಪಿ ಸೇರಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ಧುಲ್ಲಾ ಮಾಡಿದ ಕಾಮೆಂಟ್ ಒಂದಕ್ಕೆ ಲೇವಡಿ ಮಾಡಿ ಟ್ವೀಟ್ ಮಾಡಿದ್ದರು. ಅದಕ್ಕೀಗ ಒಮರ್ ಅಬ್ಧುಲ್ಲಾ ತಿರುಗೇಟು ನೀಡಿದ್ದಾರೆ.


ಜಮ್ಮು ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಿ ಬೇಕು ಎಂದು ಒಮರ್ ಅಬ್ಧುಲ್ಲಾ ಕಾಮೆಂಟ್ ಮಾಡಿದ್ದಕ್ಕೆ ಪ್ರಧಾನಿ ಮೋದಿ ಕೂಡಾ ಕಿಡಿ ಕಾರಿದ್ದರು. ಇದರ  ಬೆನ್ನಲ್ಲೇ ಗೌತಮ್ ಗಂಭೀರ್ ಕೂಡಾ ಟ್ವೀಟ್ ಮಾಡಿ ‘ಒಮರ್ ಅಬ್ಧುಲ್ಲಾಗೆ ಬೇಕಿರುವುದು ಪ್ರತ್ಯೇಕ ಪ್ರಧಾನಿಯಲ್ಲ. ಒಂದು ಸ್ಟ್ರಾಂಗ್ ಕಾಫಿ ಕೊಟ್ಟು ದೀರ್ಘ ನಿದ್ರೆ ಮಾಡಲಿ. ಆಗ ಸರಿಹೋಗುತ್ತಾರೆ. ಆಗಲೂ ಅವರಿಗೆ ಅರ್ಥವಾಗದಿದ್ದೆ ಪಾಕಿಸ್ತಾನದ ಪಾಸ್ ಪೋರ್ಟ್ ಪಡೆಯಲಿ’ ಎಂದು ಗಂಭೀರ್ ಲೇವಡಿ ಮಾಡಿದ್ದರು.

ಇದಕ್ಕೆ ಈಗ ಒಮರ್ ಅಬ್ಧುಲ್ಲಾ ‘ನನಗೆ ಕ್ರಿಕೆಟ್ ಗೊತ್ತಿಲ್ಲ. ಅದಕ್ಕೆ ನಾನು ಆಡಿಲ್ಲ. ಹಾಗೆಯೇ ಮಿಸ್ಟರ್ ಗೌತಮ್ ಗಂಭೀರ್ ನಿಮಗೆ ಏನು ಗೊತ್ತಿದೆಯೋ ಅಷ್ಟನ್ನು ಮಾಡಿಕೊಂಡು ಹೋಗಿ. ಅದು ಬಿಟ್ಟು ನಿಮಗೆ ಗೊತ್ತಿಲ್ಲದ ಜಮ್ಮು ಕಾಶ್ಮೀರ ವಿಚಾರದ ಬಗ್ಗೆಯೆಲ್ಲಾ ಮಾತನಾಡಬೇಡಿ’ ಎಂದು ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments