Webdunia - Bharat's app for daily news and videos

Install App

ಕೀಪಿಂಗ್ ನೈಪುಣ್ಯತೆಯ ಆಧಾರದಲ್ಲಿ ಪಾರ್ಥಿವ್ ಪಟೇಲ್ ರನ್ನು ಆಯ್ಕೆ ಮಾಡಿದ್ದೇವೆ: ಅನಿಲ್ ಕುಂಬ್ಳೆ

Webdunia
ಶುಕ್ರವಾರ, 25 ನವೆಂಬರ್ 2016 (10:49 IST)
ಮೊಹಾಲಿ: ವೃದ್ಧಿಮಾನ್ ಸಹಾ ಗಾಯಗೊಂಡ ಹಿನ್ನಲೆಯಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ವಿಕೆಟ್ ಕೀಪರ್ ಆಗಿ ಪಾರ್ಥಿವ್ ಪಟೇಲ್ ರನ್ನು ಆಯ್ಕೆ ಮಾಡಿದ್ದು ಕೀಪಿಂಗ್ ನಲ್ಲಿ ಅವರ ನೈಪುಣ್ಯತೆಯ ಆಧಾರದಲ್ಲಿ ಎಂದು ಕೋಚ್ ಅನಿಲ್ ಕುಂಬ್ಳೆ ಹೇಳಿಕೊಂಡಿದ್ದಾರೆ.

ಮೂರು ವರ್ಷಗಳ ನಂತರ ಪಾರ್ಥಿವ್ ಟೀಂ ಇಂಡಿಯಾಕ್ಕೆ ಆಯ್ಕೆಯಾಗಿದ್ದು ಅಚ್ಚರಿಯುಂಟು ಮಾಡಿತ್ತು. ನನಗೆ ಎಂದಾದರೂ ಒಂದು ದಿನ ಕರೆ ಬಂದೇ ಬರುತ್ತದೆಂದು ಗೊತ್ತಿತ್ತು ಎಂದು ಸ್ವತಃ ಪಾರ್ಥಿವ್ ಹೇಳಿಕೊಂಡಿದ್ದರು.

ವಿಕೆಟ್ ಕೀಪರ್ ಸ್ಥಾನಕ್ಕೆ ದಿನೇಶ್ ಕಾರ್ತಿಕ್ ಅವರನ್ನು ಪರಿಗಣಿಸದೇ ಇರುವುದಕ್ಕೆ ಕಾರಣವೇನೆಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕುಂಬ್ಳೆ, ದಿನೇಶ್ ಸದ್ಯಕ್ಕೆ ತಮಿಳು ನಾಡು ತಂಡದ ಪರ ಕೀಪಿಂಗ್ ಮಾಡುತ್ತಿಲ್ಲ ಎಂಬ ಮಾಹಿತಿ ಬಂತು. ಹೀಗಾಗಿ ಅವರನ್ನು ಪರಿಗಣಿಸಿಲ್ಲ ಎಂದರು.

ಬೆಂಗಾಳದ ರಿಷಬ್ ಪಂತ್ ರಣಜಿ ಟ್ರೋಫಿಯಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿಯೂ ಅವರನನ್ನು ಕಡೆಗಣಿಸಲಾಗಿದೆ. ರಿಷಬ್ ಬ್ಯಾಟಿಂಗ್ ನಿಂದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಆದರೆ ಪಾರ್ಥಿವ್ ರನ್ನು ಅವರ ಕೀಪಿಂಗ್ ಗುಣಮಟ್ಟವನ್ನು ಆಧರಿಸಿ ಆಯ್ಕೆ ಮಾಡಲಾಗಿದೆ ಎಂದು ಕುಂಬ್ಳೆ ಅಭಿಪ್ರಾಯಪಟ್ಟಿದ್ದಾರೆ. ಇದೇ ಕುಂಬ್ಳೆ ಬೌಲಿಂಗ್ ನಲ್ಲಿ ಪಾರ್ಥಿವ್ ಅಂದು ಕೀಪಿಂಗ್ ಮಾಡಲು ಪರದಾಡುತ್ತಿದ್ದರು. ಕೊನೆಗೆ ಮೈದಾನದಲ್ಲೇ ಪಾರ್ಥಿವ್ ಗೆ ಕುಂಬ್ಳೆ ಕೀಪಿಂಗ್ ಪಾಠ ಮಾಡುತ್ತಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Rohit Sharma: ಈ ಸಂದರ್ಭದಲ್ಲಿ ಪ್ರತಿಯೊಬ್ಬನು ಜವಾಬ್ದಾರಿಯುತವಾಗಿರಬೇಕು: ರೋಹಿತ್ ಶರ್ಮಾ

Virat Kohli: ಭಾರತ ಪಾಕಿಸ್ತಾನ ಬಗ್ಗೆ ಕೊನೆಗೂ ತುಟಿಬಿಚ್ಚಿದ ವಿರಾಟ್ ಕೊಹ್ಲಿ ಹೇಳಿದ್ದೇನು

IPL 2025: ಐಪಿಎಲ್ 2025 ರದ್ದುಗೊಳಿಸಿದ ಬಿಸಿಸಿಐ

Jay Shah: ಅಪ್ಪ ನಂಗೂ ಒಂದು ಮಿಸೈಲ್ ಕೊಡು ಎಂದು ರಾವಲ್ಪಿಂಡಿಗೆ ಹೊಡೆದ ಜಯ್ ಶಾ

IPL 2025 RCB vs LSG: ಆರ್ ಸಿಬಿ ವರ್ಸಸ್ ಎಲ್ಎಸ್ ಜಿ ಪಂದ್ಯ ಇಂದು ನಡೆಯುತ್ತಾ

ಮುಂದಿನ ಸುದ್ದಿ
Show comments