Webdunia - Bharat's app for daily news and videos

Install App

ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್ ಆಗಲು ಒಪ್ಪಿದ್ದ ರಾಹುಲ್ ದ್ರಾವಿಡ್! ಆದರೆ ಆಮೇಲೆ ಏನಾಗಿತ್ತು ಗೊತ್ತಾ?!

Webdunia
ಗುರುವಾರ, 6 ಸೆಪ್ಟಂಬರ್ 2018 (08:54 IST)
ಮುಂಬೈ: ಟೀಂ ಇಂಡಿಯಾ ಇಂಗ್ಲೆಂಡ್ ನಲ್ಲಿ ದಯನೀಯ ವೈಫಲ್ಯ ಕಂಡ ಬಳಿಕ ಇದೀಗ ಕೋಚ್ ರವಿಶಾಸ್ತ್ರಿ ಮೇಲೆ ಭಾರೀ ಟೀಕೆ ಕೇಳಿಬರುತ್ತಿದೆ. ಇದರ ನಡುವೆ ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿ ಸದಸ್ಯರಾಗಿರುವ ಸೌರವ್ ಗಂಗೂಲಿ ಸ್ಪೋಟಕ ರಹಸ್ಯವೊಂದನ್ನು ಬಾಯ್ಬಿಟ್ಟಿದ್ದಾರೆ.

ಟೀಂ ಇಂಡಿಯಾಗೆ ಕೋಚ್ ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಸಚಿನ್, ವಿವಿಎಸ್ ಮತ್ತು ಗಂಗೂಲಿ ನೇತೃತ್ವದ ಸಮಿತಿ ರವಿಶಾಸ್ತ್ರಿ ಜತೆಗೆ ಬ್ಯಾಟಿಂಗ್ ಕೋಚ್ ಆಗಿ ರಾಹುಲ್ ದ್ರಾವಿಡ್ ರನ್ನು ಮತ್ತು ಬೌಲಿಂಗ್ ಕೋಚ್ ಆಗಿ ಜಹೀರ್ ಖಾನ್ ರನ್ನು ಆಯ್ಕೆ ಮಾಡಿತ್ತು.

ಆದರೆ ಕೆಲವು ಗೊಂದಲಗಳ ನಂತರ ರವಿಶಾಸ್ತ್ರಿ ಒತ್ತಡದ ಮೇರೆ ಸಂಜಯ್ ಬಂಗಾರ್ ಮತ್ತು ಭರತ್ ಅರುಣ್ ರನ್ನು ಈ ಸ್ಥಾನಕ್ಕೆ  ಪಕ್ಕಾ ಮಾಡಲಾಯಿತು. ಆದರೆ ಸಚಿನ್, ಸೌರವ್, ಲಕ್ಷ್ಮಣ್ ನೇತೃತ್ವದ ಸಮಿತಿ ರಾಹುಲ್ ದ್ರಾವಿಡ್ ಬಳಿ ಮೊದಲು ಕೇಳಿಕೊಂಡಿದ್ದಾಗ ದ್ರಾವಿಡ್ ಬ್ಯಾಟಿಂಗ್ ಕೋಚ್ ಆಗಲು ಒಪ್ಪಿಕೊಂಡಿದ್ದರಂತೆ. ಆದರೆ ರವಿಶಾಸ್ತ್ರಿ ಬಳಿ ದ್ರಾವಿಡ್ ಮಾತುಕತೆ ನಡೆಸಿದ ಮೇಲೆ ಇದ್ದಕ್ಕಿದ್ದಂತೆ ದ್ರಾವಿಡ್ ಈ ಹುದ್ದೆಯಿಂದ ಹಿಂದೆ ಸರಿದರಂತೆ. ದ್ರಾವಿಡ್ ಮತ್ತು ಶಾಸ್ತ್ರಿ ನಡುವೆ ಅಂತಹ ಮಾತುಕತೆ ಏನು ನಡೆಯಿತು ಎಂದು ನನಗೆ ಗೊತ್ತಿಲ್ಲ ಎಂದು ಗಂಗೂಲಿ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸ್ಪೋಟಕ ಮಾಹಿತಿ ಹೊರಹಾಕಿದ್ದಾರೆ.

ಇದೀಗ ಅಂದು ನಡೆದ ಕೋಚ್ ಆಯ್ಕೆ ಪ್ರಕ್ರಿಯೆಯ ಗೊಂದಲಕ್ಕೆ ಮತ್ತಷ್ಟು ತುಪ್ಪ ಸುರಿದಂತಾಗಿದೆ. ಗಂಗೂಲಿ ಹೇಳಿಕೆ ಇದೀಗ ರವಿಶಾಸ್ತ್ರಿ ಮೇಲೆ ಮತ್ತಷ್ಟು ಅನುಮಾನ ಹುಟ್ಟಿಸುವಂತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG:ಟೀಂ ಇಂಡಿಯಾ ಕ್ಯಾಪ್ಟನ್ ಶುಭಮನ್ ಗಿಲ್ ಟಾಸ್ ಸೋಲುವುದರಲ್ಲೇ ದಾಖಲೆ

IND vs ENG: ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ 3 ಬದಲಾವಣೆ ಖಚಿತ

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ENG vs IND: ನಾಳೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾಗೆ ಬಿಗ್ ಶಾಕ್‌, ಪ್ರಮುಖ ಆಟಗಾರನೇ ಪಂದ್ಯಕ್ಕಿಲ್ಲ

ಟಿ20 ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಎಡಗೈ ಬ್ಯಾಟರ್‌ ಅಭಿಷೇಕ್ ಶರ್ಮಾ

ಮುಂದಿನ ಸುದ್ದಿ
Show comments