Webdunia - Bharat's app for daily news and videos

Install App

ಭಾರತದ ಎ ಕ್ರಿಕೆಟಿಗರ ಬಗ್ಗೆ ಖಡಕ್ ಮಾತು ಹೇಳಿದ ಕೋಚ್ ರಾಹುಲ್ ದ್ರಾವಿಡ್

Webdunia
ಶುಕ್ರವಾರ, 31 ಆಗಸ್ಟ್ 2018 (09:12 IST)
ಮುಂಬೈ: ಭಾರತ ಎ ತಂಡದ ಕೋಚ್ ಆಗಿ ರಾಹುಲ್ ದ್ರಾವಿಡ್ ಟೀಂ ಇಂಡಿಯಾಕ್ಕೆ ಉತ್ತಮ ಆಟಗಾರರನ್ನೇ ತಯಾರು ಮಾಡುತ್ತಿದ್ದಾರೆ.

ಇದಕ್ಕೆ ಕಾರಣ ಕೋಚ್ ರಾಹುಲ್ ದ್ರಾವಿಡ್ ರ ಕೋಚಿಂಗ್ ಸ್ಟೈಲ್. ಅವರು ತಮ್ಮ ಹುಡುಗರ ಮೇಲೆ ಫಲಿತಾಂಶದ ಬಗ್ಗೆ ಒತ್ತಡ ಹೇರಲ್ಲ. ಬದಲಾಗಿ ಆಟಗಾರರ ಆಟದ ಶೈಲಿ ಸುಧಾರಣೆ, ಒಬ್ಬ ಪರಿಪೂರ್ಣ ಆಟಗಾರನಾಗಿ ಬೆಳೆಯುವುದಕ್ಕೆ ಪೂರಕ ವಾತಾವರಣ ಒದಗಿಸುವುದರ ಬಗ್ಗೆ ಯೋಚನೆ ಮಾಡುತ್ತಾರೆ.

ಇದೀಗಷ್ಟೇ ಇಂಗ್ಲೆಂಡ್, ಶ್ರೀಲಂಕಾ ಸರಣಿ ಮುಗಿಸಿ ಬಂದಿರುವ ತಮ್ಮ ತಂಡದ ಬಗ್ಗೆ ಮಾತನಾಡಿರುವ ದ್ರಾವಿಡ್ ನಮಗೆ ಫಲಿತಾಂಶ ಮುಖ್ಯವಲ್ಲ. ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗುವುದಷ್ಟೇ ಉದ್ದೇಶವಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ. ಆಟಗಾರರ ಸರ್ವಾಂಗೀಣ ಅಭಿವೃದ್ಧಿ ಬಗ್ಗೆ ಹೆಚ್ಚು ಗಮನಕೊಡುತ್ತಿದ್ದೇವೆ. ರಾಷ್ಟ್ರೀಯ ತಂಡಕ್ಕೆ ಸೂಕ್ತವಾಗುವಂತಹ ಒಬ್ಬ ಅತ್ಯುತ್ತಮ ಆಟಗಾರನಾಗಿ ರೂಪುಗೊಳಿಸುವುದು ನಮ್ಮ ಎ ತಂಡದ ಉದ್ದೇಶ ಎಂದು ದ್ರಾವಿಡ್ ಹೇಳಿದ್ದಾರೆ. ದ್ರಾವಿಡ್ ರ ಈ ಮನೋಭಾವದಿಂದಾಗಿಯೇ ಈವತ್ತು ಟೀಂ ಇಂಡಿಯಾಗೆ ಉತ್ತಮ ಯುವ ಆಟಗಾರರ ಆಗಮನವಾಗುತ್ತಿದೆ ಎಂದರೆ ತಪ್ಪಲ್ಲ!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.              

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments