ಸುನಿಲ್ ಗವಾಸ್ಕರ್ v/s ರವಿಶಾಸ್ತ್ರಿ ವಾಗ್ಯುದ್ಧ

Webdunia
ಸೋಮವಾರ, 24 ಡಿಸೆಂಬರ್ 2018 (09:24 IST)
ಮೆಲ್ಬೋರ್ನ್: ಆಸ್ಟ್ರೇಲಿಯಾ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆಯ್ಕೆ ಸರಿಯಾಗಲಿಲ್ಲ ಎಂದು ಅಭಿಪ್ರಾಯಪಟ್ಟಿದ್ದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಗೆ ಕೋಚ್ ರವಿಶಾಸ್ತ್ರಿ ತಿರುಗೇಟು ಕೊಟ್ಟಿದ್ದಾರೆ.


ತಂಡದ ಆಯ್ಕೆ ಸರಿಯಾಗದ ಕಾರಣಕ್ಕೇ ಟೀಂ ಇಂಡಿಯಾ ದ. ಆಫ್ರಿಕಾ ಪ್ರವಾಸದಿಂದಲೂ ಅನಿರೀಕ್ಷಿತ ಸೋಲು ಕಾಣುತ್ತಿದೆ. ಒಂದು ವೇಳೆ ಆಸ್ಟ್ರೇಲಿಯಾ ಸರಣಿ ಸೋತರೆ ಕೋಚ್ ಮತ್ತು ನಾಯಕನಿಂದ ವಿವರಣೆ ಪಡೆಯಬೇಕು ಎಂದು ಗವಾಸ್ಕರ್ ಕಿಡಿ ಕಾರಿದ್ದರು.

ಇದರ ಬಗ್ಗೆ ರವಿಶಾಸ್ತ್ರಿ ಪರೋಕ್ಷ ಟಾಂಗ್ ಕೊಟ್ಟಿದ್ದು, ‘ಸಾವಿರಾರು ಮೈಲಿ ದೂರ ನಿಂತುಕೊಂಡು ನಮ್ಮ ಬಗ್ಗೆ ಕಾಮೆಂಟ್ ಮಾಡುವುದು ಸುಲಭ. ಆದರೆ ನಾವು ತಂಡಕ್ಕೆ ಏನು ಅತ್ಯುತ್ತಮ ಎನಿಸುತ್ತದೋ ಅದನ್ನೇ ಮಾಡುತ್ತೇವೆ ಅಷ್ಟೇ’ ಎಂದು ತಿರುಗೇಟು ಕೊಟ್ಟಿದ್ದಾರೆ.

ಇನ್ನು ನಾಯಕ ವಿರಾಟ್ ಕೊಹ್ಲಿ ಆಕ್ರಮಣಕಾರಿ ವರ್ತನೆ ಬಗ್ಗೆ ಟೀಕೆ ಮಾಡುತ್ತಿರುವವರಿಗೂ ತಿರುಗೇಟು ಕೊಟ್ಟಿರುವ ಶಾಸ್ತ್ರಿ ‘ವಿರಾಟ್ ಸ್ವಭಾವದಲ್ಲಿ ಏನು ತಪ್ಪಿದೆ? ಅವರು ಖಂಡಿತವಾಗಿಯೂ ಒಬ್ಬ ಜಂಟಲ್ ಮ್ಯಾನ್’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli birthday: ಎಂಜಿ ರೋಡ್ ನಲ್ಲಿ ಮೊದಲು ಟ್ಯಾಟೂ ಹಾಕಿಸಿದ್ದ ಕೊಹ್ಲಿ ಆಮೇಲೆ ಮುಚ್ಚಿಟ್ಟಿದ್ದು ಯಾಕೆ

ತಿಲಕ ಬೇಡ ಎಂದ ಸ್ಮೃತಿ ಮಂಧಾನ: ಯಾಕೆ ಹೀಗೆ ನೆಟ್ಟಿಗರ ಪ್ರಶ್ನೆ: video

ಜಯ್ ಶಾ ಎಂದ್ರೆ ಸುಮ್ನೇ ಅಲ್ಲ, ಮಹಿಳಾ ಕ್ರಿಕೆಟ್ ತಾರೆಯರಿಗೆ ಇದಕ್ಕೇ ಜಯ್ ಶಾ ಮೆಲೆ ಪ್ರೀತಿ

ಪ್ರಧಾನಿ ಭೇಟಿಗೆ ಸಿದ್ಧರಾದ ಚಾಂಪಿಯನ್ ಭಾರತ ಮಹಿಳಾ ಕ್ರಿಕೆಟಿಗರು: ಮೋದಿಗೆ ಏನು ಗಿಫ್ಟ್ ಕೊಡಲಿದ್ದಾರೆ

ಹರ್ಮನ್ ಪ್ರೀತ್ ಕೌರ್ ಪಡೆಗಿಲ್ಲ ವಿಕ್ಟರಿ ಪೆರೇಡ್ ಭಾಗ್ಯ: ಇದಕ್ಕೆಲ್ಲಾ ಬೆಂಗಳೂರೇ ಕಾರಣ

ಮುಂದಿನ ಸುದ್ದಿ
Show comments