Webdunia - Bharat's app for daily news and videos

Install App

ಕೋಚ್ ಆಗಲು ಬಿಸಿಸಿಐಗೆ ಷರತ್ತು ವಿಧಿಸಿದ ರವಿ ಶಾಸ್ತ್ರಿ

Webdunia
ಶುಕ್ರವಾರ, 23 ಜೂನ್ 2017 (08:45 IST)
ಮುಂಬೈ: ಅನಿಲ್ ಕುಂಬ್ಳೆಯಿಂದ ತೆರವಾದ ಟೀಂ ಇಂಡಿಯಾ ಕೋಚ್ ಹುದ್ದೆ ಆಯ್ಕೆ ಕಸರತ್ತು ನಡೆಯುತ್ತಿದ್ದು, ನಾಯಕ ವಿರಾಟ್ ಕೊಹ್ಲಿ ಮನಸು ಮಾಜಿ ನಿರ್ದೇಶಕ ರವಿ ಶಾಸ್ತ್ರಿ ಮೇಲಿದೆ.

 
ಗಂಗೂಲಿ, ಲಕ್ಷ್ಮಣ್ ಮತ್ತು ಸಚಿನ್ ರನ್ನು ಒಳಗೊಂಡ ಕ್ರಿಕೆಟ್ ಸಲಹಾ ಸಮಿತಿ ಕೊಹ್ಲಿ ಬಳಿ ಈಗಾಗಲೇ ಕೋಚ್ ಹುದ್ದೆಗೆ ಅರ್ಜಿ ಹಾಕಿದವರಲ್ಲದೆ, ಇನ್ನೊಬ್ಬರ ಹೆಸರು ಸೂಚಿಸುವಂತೆ ಹೇಳಿದಾಗ ಕೊಹ್ಲಿ ಶಾಸ್ತ್ರಿ ಹೆಸರನ್ನು ಸೂಚಿಸಿದ್ದರಂತೆ.

ತಮ್ಮಿಬ್ಬರ ನಡುವಿನ ಸಾಮರಸ್ಯವನ್ನು ನೆನಪಿಸಿದ್ದ ಕೊಹ್ಲಿ ಅವರನ್ನೇ ಆಯ್ಕೆ ಮಾಡುವಂತೆ ಸಲಹಾ ಸಮಿತಿ ಎದುರು ಹೇಳಿದ್ದಾರಂತೆ. ಹೀಗಾಗಿ ಇದೀಗ ಬಿಸಿಸಿಐ ರವಿ ಶಾಸ್ತ್ರಿಗೆ ಮಣೆ ಹಾಕುವ ಸಾಧ್ಯತೆ ಹೆಚ್ಚಿದೆ.

ಆದರೆ ಅವರು ಅರ್ಜಿ ಸಲ್ಲಿಸಿಲ್ಲ. ಈ ಬಗ್ಗೆ ಅವರನ್ನು ಪ್ರಶ್ನಿಸಿದಾಗ ಒಂದು ಷರತ್ತು ವಿಧಿಸಿದ್ದಾರೆಂದು ಬಿಸಿಸಿಐ ಮೂಲಗಳು ಹೇಳಿರುವುದಾಗಿ ವರದಿಯಾಗಿದೆ. ಯಾವುದೇ ಕಾರಣಕ್ಕೂ ತನ್ನನ್ನು ಆಯ್ಕೆ ಮಾಡುವವರ ಎದುರು ಸಂದರ್ಶನಕ್ಕೆ ನಿಲ್ಲಿಸಬಾರದು. ಒಂದು ವೇಳೆ ನನ್ನನ್ನು ಆಯ್ಕೆ ಮಾಡುವುದಿದ್ದರೆ, ಸಂದರ್ಶನವಿಲ್ಲದೇ ನೇರವಾಗಿ ಕೋಚ್ ಆಗಿ ನೇಮಕ ಮಾಡಬೇಕು ಎಂಬುದೇ ಆ ಷರತ್ತು.

ಕಳೆದ ವರ್ಷ ಕೋಚ್ ಆಯ್ಕೆ ಪ್ರಕ್ರಿಯೆಯಲ್ಲಿ ತಮ್ಮನ್ನು ಸಂದರ್ಶಿಸುವಾಗ ಸಲಹಾ ಸದಸ್ಯರಲ್ಲೊಬ್ಬರಾದ ಗಂಗೂಲಿ ಹಾಜರಿರಲಿಲ್ಲ. ತಮ್ಮನ್ನು ನಾಮಾವಸ್ಥೆ ಸಂದರ್ಶಿಸಲಾಗಿತ್ತು ಎಂದು ರವಿ ಶಾಸ್ತ್ರಿ ದೂರಿದ್ದರು. ಈ ಹಿನ್ನಲೆಯಲ್ಲಿ ಅವರು ಈ ಷರತ್ತು ವಿಧಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಪಂದ್ಯ ನಿಂತ್ರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಿರಾಕಲ್‌ಗೆ ಕೊಹ್ಲಿ ಅಭಿಮಾನಿಗಳು ಫುಲ್ ಖುಷ್‌, Video Viral

Bengaluru Rain: ಇಂದಿನ KKR vs RCB ಪಂದ್ಯಾಟದ ಟಿಕೆಟ್ ಖರೀದಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments