ಧೋನಿ ಮೇಲೆ ಮುನಿಸಿಗೆ ತೆರೆ ಎಳೆದ ರವಿಚಂದ್ರನ್ ಅಶ್ವಿನ್

Webdunia
ಶನಿವಾರ, 7 ಜನವರಿ 2017 (11:02 IST)
ಚೆನ್ನೈ: ಧೋನಿ ಮತ್ತು ತಮ್ಮ ನಡುವೆ ಎಲ್ಲವೂ ಸರಿಯಿಲ್ಲ ಎಂಬ ವದಂತಿಗಳಿಗೆ ಸ್ವತಃ ರವಿಚಂದ್ರನ್ ಅಶ್ವಿನ್ ತೆರೆ ಎಳೆದಿದ್ದಾರೆ. ಅವರು ನಡೆದ ಹಾದಿಯನ್ನು ಸರಿಗಟ್ಟುವುದು ಕಷ್ಟದ ಕೆಲಸ ಎಂದು ಧೋನಿಯನ್ನು ಕೊಂಡಾಡಿದ್ದಾರೆ.


“ಎಂಎಸ್ ಧೋನಿ ನಾಯಕತ್ವದಿಂದ ಕಲಿಯುವಂತಹದ್ದು ಸಾಕಷ್ಟಿದೆ. ಇದು ಅವರ ವೈಯಕ್ತಿಕ ನಿರ್ಧಾರ. ಅದರ ಬಗ್ಗೆ ನಾನೇನೂ ಕಾಮೆಂಟ್ ಮಾಡಲಾಗದು. ಆದರೆ ಅವರು ಮಾಡಿದ ಸಾಧನೆಯನ್ನು ಮಾಡುವುದು ಅಷ್ಟು ಸುಲಭವಲ್ಲ” ಎಂದು ಧೋನಿ ನಾಯಕತ್ವದ ಬಗ್ಗೆ ಅಭಿಪ್ರಾಯಪಟ್ಟಿದ್ದಾರೆ.

ಆದರೆ ಧೋನಿಯಂತಹ ನಾಯಕನನ್ನು ಭಾರತ ಇನ್ನು ಕಾಣಲು ಸಾಧ್ಯವಿಲ್ಲವೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅಶ್ವಿನ್ “ಹಾಗೆ ಹೇಳಲು ಸಾಧ್ಯವಾಗದು. ಕೊಹ್ಲಿ ಯಾವ ಲೆಕ್ಕದಲ್ಲೂ ಕಮ್ಮಿಯಲ್ಲ. ಹಿಂದೆ ಸೌರವ್ ಗಂಗೂಲಿಯನ್ನು ಹಾಗೇ ಹೇಳಲಾಗುತ್ತಿತ್ತು. ಆದರೆ ಗಂಗೂಲಿ ನಂತರ ಧೋನಿ ಬಂದು ಹಲವು ಸಾಧನೆಗಳನ್ನು ಮಾಡಿದರು. ಹಾಗೇ ಕೊಹ್ಲಿಯೂ ಮಾಡಬಹುದು” ಎಂದಿದ್ದಾರೆ.

ಐಸಿಸಿ ವರ್ಷದ ಕ್ರಿಕೆಟಿಗ ಪ್ರಶಸ್ತಿ ಲಭಿಸಿದಾಗ ತಮ್ಮ ವೃತ್ತಿ ಜೀವನದಲ್ಲಿ ಪ್ರೋತ್ಸಾಹಿಸಿದ ಎಲ್ಲರ ಹೆಸರನ್ನು ಉಲ್ಲೇಖಿಸಿದರೂ, ಅಶ್ವಿನ್ ಧೋನಿ ಹೆಸರು ಹೇಳದೇ ಇದ್ದುದ್ದು, ಇವರಿಬ್ಬರ ನಡುವೆ ಸಂಬಂಧ ಹಳಸಿದೆ ಎಂಬ ವದಂತಿಗಳು ಬಂದಿತ್ತು. ಆದರೆ ಇದೀಗ ಧೋನಿ ಬಗ್ಗೆ ಹೊಗಳಿ ಅಶ್ವಿನ್ ತಮ್ಮ ಮೊದಲ ನಾಯಕನಿಗೆ ಗೌರವ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶೇಷ ಸಾಮಾರ್ಥ್ಯವುಳ್ಳ ಅಭಿಮಾನಿಯೊಂದಿಗಿನ ನಡೆಗೆ ವಿರಾಟ್, ಅನುಷ್ಕಾಗೆ ಭಾರೀ ಟೀಕೆ

ಐಪಿಎಲ್‌ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆ: ಆರ್‌ಸಿಬಿಗೆ ಘಟಾನುಘಟಿಗಳ ಎಂಟ್ರಿ

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

ಮುಂದಿನ ಸುದ್ದಿ
Show comments