ತಂಡದಿಂದ ಕೈ ಬಿಟ್ಟರೂ ರವಿಚಂದ್ರನ್ ಅಶ್ವಿನ್ ಬೇಸರ ಮಾಡಿಕೊಳ್ಳಲ್ವಂತೆ!

Webdunia
ಗುರುವಾರ, 8 ಜೂನ್ 2017 (09:14 IST)
ಲಂಡನ್: ಸಾಮಾನ್ಯವಾಗಿ ತಂಡದಿಂದ ಕೈ ಬಿಟ್ಟರೆ, ಅದೂ ಮಹತ್ವದ ಟೂರ್ನಿಯಲ್ಲಿ ಹೊರಗುಳಿಯುವಂತಾದರೆ ಪ್ರಮುಖ ಆಟಗಾರರೆನಿಸಿಕೊಂಡವರು ಮುನಿಸಿಕೊಳ್ಳುತ್ತಾರೆ. ಆದರೆ ಆರ್. ಅಶ್ವಿನ್ ಹಾಗಲ್ವಂತೆ!

 
ಹಾಗಂತ ನಾಯಕ ವಿರಾಟ್ ಕೊಹ್ಲಿ ಹೇಳಿಕೊಂಡಿದ್ದಾರೆ. ಪಾಕ್ ವಿರುದ್ಧದ ಪಂದ್ಯದಲ್ಲಿ ಅಶ್ವಿನ್ ಗೆ ಆಡುವ ಬಳಗದಲ್ಲಿ ಸ್ಥಾನ ಸಿಕ್ಕಿರಲಿಲ್ಲ. ಈ ಬಗ್ಗೆ ಕೊಹ್ಲಿಯನ್ನು ಪ್ರಶ್ನಿಸಿದಾಗ ಅವರು ಈ ರೀತಿ ಹೇಳಿದ್ದಾರೆ.

ತಂಡದಿಂದ ಕೈಬಿಡುವ ನಿರ್ಧಾರಕ್ಕೆ ಅಶ್ವಿನ್ ತಮ್ಮ ಮೇಲೆ ಬೇಸರಿಸಿಕೊಳ್ಳುವುದಿಲ್ಲ. ಬದಲಾಗಿ ಬೆಂಬಲಿಸುತ್ತಾರೆ ಎಂದು ಕೊಹ್ಲಿ ಪ್ರಶಂಸಿಸಿದ್ದಾರೆ. ಅವರು ಟಾಪ್ ಪ್ಲೇಯರ್. ಅವರಿಗೆ ತಂಡದ ಸಮತೋಲನವನ್ನು ಅರ್ಥ ಮಾಡಿಕೊಳ್ಳುವ ಒಳ್ಳೆಯತನವಿದೆ. ಏನೇ ನಿರ್ಧಾರ ತೆಗೆದುಕೊಂಡರೂ ನಿನ್ನ ಜತೆಗೆ ನಾನಿದ್ದೇನೆ ಎಂದು ಬೆನ್ನುತಟ್ಟುತ್ತಾರೆ ಎಂದಿದ್ದಾರೆ ಕೊಹ್ಲಿ.

ಬೌಲಿಂಗ್ ಮಾಡುವಾಗ ಫೀಲ್ಡಿಂಗ್ ಸಂಯೋಜನೆ ವಿಷಯದಲ್ಲಿ ನಮ್ಮ ನಡುವೆ ಭಿನ್ನಾಭಿಪ್ರಾಯಗಳಿರುತ್ತವೆ. ಆದರೆ ತಂಡದ ಆಯ್ಕೆಯ ವಿಷಯಕ್ಕೆ ಬಂದಾಗ ನನ್ನ ನಿರ್ಧಾರವನ್ನು ಅವರು ಬೆಂಬಲಿಸುತ್ತಾರೆ ಎಂದು ಕೊಹ್ಲಿ ಅಶ್ವಿನ್ ರನ್ನು ಹೊಗಳಿದ್ದಾರೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

IPL Auction 2026: ಕ್ಯಾಮರೂನ್ ಗ್ರೀನ್ ಗೆ 25 ಕೋಟಿ, ಮಹೇಶ್ ಪತಿರಾಣಗೆ 18 ಕೋಟಿ: ಐಪಿಎಲ್ ಭರ್ಜರಿ ಸೇಲ್

ಐಪಿಎಲ್‌ ಮಿನಿ ಹರಾಜಿಗೆ ಕ್ಷಣಗಣನೆ: ಯಾರಿಗೆ ಒಲಿಯಲಿದೆ ಜಾಕ್‌ಪಾಟ್‌, ನೇರಪ್ರಸಾರದ ಮಾಹಿತಿ ಇಲ್ಲಿದೆ

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಮುಂದಿನ ಸುದ್ದಿ
Show comments