Select Your Language

Notifications

webdunia
webdunia
webdunia
webdunia

ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಯಿಂದ ಹೊರಬಿದ್ದ ರವೀಂದ್ರ ಜಡೇಜಾ

ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಯಿಂದ ಹೊರಬಿದ್ದ ರವೀಂದ್ರ ಜಡೇಜಾ
ಸಿಡ್ನಿ , ಶನಿವಾರ, 5 ಡಿಸೆಂಬರ್ 2020 (09:18 IST)
ಸಿಡ್ನಿ: ಮೊದಲ ಟಿ20 ಪಂದ್ಯದ ವೇಳೆ ಗಾಯಗೊಂಡ ಟೀಂ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ ಸರಣಿಯ ಉಳಿದ ಪಂದ್ಯಗಳಿಂದ ಹೊರಬಿದ್ದಿದ್ದಾರೆ.


ಜಡೇಜಾ ನಿನ್ನೆಯ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವಾಗ ಹೆಲ್ಮೆಟ್ ಗೆ ಬಾಲ್ ತಗುಲಿದ ಪರಿಣಾಮ ಅರ್ಧದಲ್ಲೇ ಪಂದ್ಯ ಬಿಟ್ಟು ಹೊರನಡೆದಿದ್ದರು. ಅವರು ಬಳಿಕ ಬೌಲಿಂಗ್ ಮಾಡಿರಲಿಲ್ಲ. ಇದೀಗ ಅವರನ್ನು ಪರೀಕ್ಷಿಸಿದ ವೈದ್ಯರು ಸುರಕ್ಷತಾ ದೃಷ್ಟಿಯಿಂದ ಉಳಿದ ಪಂದ್ಯಗಳಲ್ಲಿ ಆಡದಂತೆ ಸೂಚಿಸಿದ್ದಾರೆ. ವಿಪರ್ಯಾಸವೆಂದರೆ ಏಕದಿನ ಸರಣಿಯಿಂದ ನಿನ್ನೆಯ ಪಂದ್ಯದವರೆಗೂ ಜಡೇಜಾ ಭಾರತದ ಪಾಲಿಗೆ ಎಲ್ಲಾ ಪಂದ್ಯಗಳಲ್ಲೂ ಆಪತ್ಬಾಂಧವನಂತೆ ಆಡಿದ್ದರು. ಇದೀಗ ಅವರೇ ಟೂರ್ನಿಯಿಂದ ಹೊರಬಿದ್ದಿರುವುದು ಭಾರತಕ್ಕೆ ದೊಡ್ಡ ಹೊಡೆತ ನೀಡಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಉಪನಾಯಕನಾದ ಮೊದಲ ಪಂದ್ಯದಲ್ಲೇ ಕೆಎಲ್ ರಾಹುಲ್ ಕಮಾಲ್