Webdunia - Bharat's app for daily news and videos

Install App

ಕುಂಬ್ಳೆ-ಕೊಹ್ಲಿ ಕಲಹಕ್ಕೆ ಮಧ್ಯಸ್ಥಿಕೆ ವಹಿಸಿದ್ದರಂತೆ ಗಂಗೂಲಿ, ಸಚಿನ್

Webdunia
ಗುರುವಾರ, 24 ಅಕ್ಟೋಬರ್ 2019 (09:52 IST)
ಮುಂಬೈ: ಟೀಂ ಇಂಡಿಯಾ ಕೋಚ್ ಆಗಿದ್ದ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಮತ್ತು ನಾಯಕ ವಿರಾಟ್ ಕೊಹ್ಲಿ ನಡುವೆ ವೈಮನಸ್ಯ ಮೂಡಿದ್ದಾಗ ಸರಿಪಡಿಸಲು ಸಚಿನ್ ತೆಂಡುಲ್ಕರ್ ಮತ್ತು ಸೌರವ್ ಗಂಗೂಲಿ ಮಧ್ಯಸ್ಥಿಕೆ ವಹಿಸಿದ್ದರಂತೆ.


ಈ ವಿಚಾರವನ್ನು ಬಿಸಿಸಿಐನ ಸಿಇಒ ಆಗಿದ್ದ ವಿನೋದ್ ರಾಯ್ ಬಹಿರಂಗಪಡಿಸಿದ್ದಾರೆ.  ಚಾಂಪಿಯನ್ಸ್ ಟ್ರೋಫಿ ಸಂದರ್ಭದಲ್ಲಿ ಇವರಿಬ್ಬರ ನಡುವಿನ ಅಸಮಾಧಾನ ತಾರಕಕ್ಕೇರಿತ್ತು. ಆ ಸಂದರ್ಭದಲ್ಲಿ ನನಗೆ ಕೊಹ್ಲಿಯನ್ನು ಅಷ್ಟೊಂದು ಪರಿಚಯವಿರಲಿಲ್ಲ. ಹೀಗಾಗಿ ಸಚಿನ್ ಮತ್ತು ಗಂಗೂಲಿಗೆ ಕೊಹ್ಲಿ ಜತೆ ಮಾತನಾಡುವಂತೆ ಹೇಳಿದ್ದೆ.

ಯಾಕೆಂದರೆ ಅನಿಲ್ ಕುಂಬ್ಳೆ ಬಗ್ಗೆ ನನಗೆ ಅಪಾರ ಗೌರವವಿತ್ತು. ಒಂದು ವೇಳೆ ಅವರ ಒಪ್ಪಂದ ಮುಂದುವರಿಸಲು ಅವಕಾಶವಿದ್ದರೆ ಅದನ್ನೇ ಮಾಡುತ್ತಿದ್ದೆ. ಆದರೆ ಸಚಿನ್ ಮತ್ತು ಗಂಗೂಲಿ ಕೂಡಾ ಇಂಗ್ಲೆಂಡ್ ನಲ್ಲಿದ್ದಾಗ ಕೊಹ್ಲಿ ಜತೆ ಸುದೀರ್ಘ ಮಾತುಕತೆ ನಡೆಸಿದ್ದರು. ಆದರೆ ಕೊಹ್ಲಿ ಯಾವುದೇ ಕಾರಣಕ್ಕೂ ಕುಂಬ್ಳೆಯನ್ನು ಒಪ್ಪಲು ಸಿದ್ಧರಿರಲಿಲ್ಲ. ಕೋಚ್ ಮತ್ತು ನಾಯಕನ ನಡುವೆ ವೈಮನಸ್ಯ ಬಂದಾಗ ಯಾವತ್ತೂ ತಲೆದಂಡವಾಗುವುದು ಕೋಚ್ ನದ್ದೇ. ಇಲ್ಲೂ ಅದೇ ಆಗುವುದಿತ್ತು. ಆದರೆ ಅದಕ್ಕಿಂತ ಮೊದಲು ಕುಂಬ್ಳೆಯೇ ಗೌರವಯುತವಾಗಿ ಹೊರನಡೆದರು. ಅವರ ಮೇಲೆ ನನಗೆ ಯಾವತ್ತೂ ಗೌರವವಿದೆ ಎಂದು ವಿನೋದ್ ರಾಯ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಮುಂದಿನ ಸುದ್ದಿ
Show comments