Webdunia - Bharat's app for daily news and videos

Install App

ಕುಂಬ್ಳೆ-ಕೊಹ್ಲಿ ಕಲಹಕ್ಕೆ ಮಧ್ಯಸ್ಥಿಕೆ ವಹಿಸಿದ್ದರಂತೆ ಗಂಗೂಲಿ, ಸಚಿನ್

Webdunia
ಗುರುವಾರ, 24 ಅಕ್ಟೋಬರ್ 2019 (09:52 IST)
ಮುಂಬೈ: ಟೀಂ ಇಂಡಿಯಾ ಕೋಚ್ ಆಗಿದ್ದ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಮತ್ತು ನಾಯಕ ವಿರಾಟ್ ಕೊಹ್ಲಿ ನಡುವೆ ವೈಮನಸ್ಯ ಮೂಡಿದ್ದಾಗ ಸರಿಪಡಿಸಲು ಸಚಿನ್ ತೆಂಡುಲ್ಕರ್ ಮತ್ತು ಸೌರವ್ ಗಂಗೂಲಿ ಮಧ್ಯಸ್ಥಿಕೆ ವಹಿಸಿದ್ದರಂತೆ.


ಈ ವಿಚಾರವನ್ನು ಬಿಸಿಸಿಐನ ಸಿಇಒ ಆಗಿದ್ದ ವಿನೋದ್ ರಾಯ್ ಬಹಿರಂಗಪಡಿಸಿದ್ದಾರೆ.  ಚಾಂಪಿಯನ್ಸ್ ಟ್ರೋಫಿ ಸಂದರ್ಭದಲ್ಲಿ ಇವರಿಬ್ಬರ ನಡುವಿನ ಅಸಮಾಧಾನ ತಾರಕಕ್ಕೇರಿತ್ತು. ಆ ಸಂದರ್ಭದಲ್ಲಿ ನನಗೆ ಕೊಹ್ಲಿಯನ್ನು ಅಷ್ಟೊಂದು ಪರಿಚಯವಿರಲಿಲ್ಲ. ಹೀಗಾಗಿ ಸಚಿನ್ ಮತ್ತು ಗಂಗೂಲಿಗೆ ಕೊಹ್ಲಿ ಜತೆ ಮಾತನಾಡುವಂತೆ ಹೇಳಿದ್ದೆ.

ಯಾಕೆಂದರೆ ಅನಿಲ್ ಕುಂಬ್ಳೆ ಬಗ್ಗೆ ನನಗೆ ಅಪಾರ ಗೌರವವಿತ್ತು. ಒಂದು ವೇಳೆ ಅವರ ಒಪ್ಪಂದ ಮುಂದುವರಿಸಲು ಅವಕಾಶವಿದ್ದರೆ ಅದನ್ನೇ ಮಾಡುತ್ತಿದ್ದೆ. ಆದರೆ ಸಚಿನ್ ಮತ್ತು ಗಂಗೂಲಿ ಕೂಡಾ ಇಂಗ್ಲೆಂಡ್ ನಲ್ಲಿದ್ದಾಗ ಕೊಹ್ಲಿ ಜತೆ ಸುದೀರ್ಘ ಮಾತುಕತೆ ನಡೆಸಿದ್ದರು. ಆದರೆ ಕೊಹ್ಲಿ ಯಾವುದೇ ಕಾರಣಕ್ಕೂ ಕುಂಬ್ಳೆಯನ್ನು ಒಪ್ಪಲು ಸಿದ್ಧರಿರಲಿಲ್ಲ. ಕೋಚ್ ಮತ್ತು ನಾಯಕನ ನಡುವೆ ವೈಮನಸ್ಯ ಬಂದಾಗ ಯಾವತ್ತೂ ತಲೆದಂಡವಾಗುವುದು ಕೋಚ್ ನದ್ದೇ. ಇಲ್ಲೂ ಅದೇ ಆಗುವುದಿತ್ತು. ಆದರೆ ಅದಕ್ಕಿಂತ ಮೊದಲು ಕುಂಬ್ಳೆಯೇ ಗೌರವಯುತವಾಗಿ ಹೊರನಡೆದರು. ಅವರ ಮೇಲೆ ನನಗೆ ಯಾವತ್ತೂ ಗೌರವವಿದೆ ಎಂದು ವಿನೋದ್ ರಾಯ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments