Webdunia - Bharat's app for daily news and videos

Install App

ಭಾರತ ರತ್ನ ಬಿರುದಿಗೆ ತಕ್ಕಂತೆ ನಡೆದುಕೊಂಡ ಸಚಿನ್ ತೆಂಡುಲ್ಕರ್!

Webdunia
ಬುಧವಾರ, 15 ಫೆಬ್ರವರಿ 2017 (09:21 IST)
ಮುಂಬೈ: ಸಚಿನ್ ತೆಂಡುಲ್ಕರ್ ಮಾಡುವ ಕೆಲವೊಂದು ಸಾಮಾಜಿಕ ಕಳಕಳಿಯ ಕೆಲಸಗಳು ಗೊತ್ತೇ ಆಗಲ್ಲ. ಆದರೆ ಅವರು ಮಾಡುವ ಕೆಲಸಗಳು ಅಷ್ಟು ಅಚ್ಚುಕಟ್ಟಾಗಿ ಮತ್ತು ಸಮಾಜಕ್ಕೆ ಒಳಿತಾಗುವಂತಿರುತ್ತದೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.

 
ಅಂತಹದ್ದೇನು ಮಾಡಿದರು ಅವರು? ನಿಮಗೆ ಗೊತ್ತಿರಬಹುದು. ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆಯಾದ ಆದರ್ಶ ಸಂಸದ ಗ್ರಾಮ ಯೋಜನೆ ಜಾರಿಗೆ ತಂದಾಗ ಮೊದಲು ಅದನ್ನು ಕೈಗೆತ್ತಿಕೊಂಡಿದ್ದೇ ಸಚಿನ್ ತೆಂಡುಲ್ಕರ್. ರಾಜ್ಯ ಸಭಾ ಸದಸ್ಯರೂ ಆಗಿರುವ ಸಚಿನ್ ಸಂಸತ್ತು ಕಲಾಪದಲ್ಲಿ ಭಾಗವಹಿಸಿರದಿದ್ದರೂ, ಆಂಧ್ರ ಪ್ರದೇಶದ ಒಂದು ಕುಗ್ರಾಮವನ್ನು ದತ್ತು ಪಡೆದು ಸುಸಜ್ಜಿತ ಗ್ರಾಮವಾಗಿ  ಮೆಚ್ಚುಗೆಗೆ ಪಾತ್ರವಾಗಿದ್ದರು.

ಇದೀಗ ಮತ್ತೊಂದು ಕುಗ್ರಾಮವನ್ನು ಅಭಿವೃದ್ಧಿ ಮಾಡಲು ತೆಂಡುಲ್ಕರ್ ಗ್ರಾಮ ದತ್ತು ಪಡೆದಿದ್ದಾರೆ. ಮಹಾರಾಷ್ಟ್ರದ ಡೊಂಗಾ ಗ್ರಾಮವನ್ನು ದತ್ತು ಪಡೆದು ಅಭಿವೃದ್ಧಿಗೆ ಪಣ ತೊಟ್ಟಿದ್ದಾರೆ. ಇದಕ್ಕಾಗಿ ಸಂಸದರ ನಿಧಿಯಿಂದ 4 ಕೋಟಿ ರೂ. ವೆಚ್ಚ ಮಾಡಲಿದ್ದಾರೆ. ಇಲ್ಲಿಗೆ ಅಗತ್ಯವಾದ ಮೂಲ ಭೂತ ಸೌಕರ್ಯಗಳನ್ನೆಲ್ಲಾ ಒದಗಿಸಲಿದ್ದಾರೆ. ಈಗ ಹೇಳಿ. ಅವರಿಗೆ ಭಾರತ ರತ್ನ ಕೊಟ್ಟಿದ್ದಕ್ಕೂ ಸಾರ್ಥಕವಾಯಿತಲ್ಲವೇ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ          
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಸಿಸಿ ಹೊಸ ಸಿಇಓ ಆಗಿ ಭಾರತೀಯ ಸಂಜೋಗ್ ಗುಪ್ತಾ, ಇವರ ಸಾಧನೆ ಇಲ್ಲಿದೆ

ಅಭಿನಂದಿಸಲು ಸಿರಾಜ್‌ನನ್ನೇ ಕೈಬಿಟ್ಟ ಜಯ್‌ಶಾ: ಮುಸ್ಲಿಂ ಎಂಬ ಕಾರಣವೇ ಹೊಗಳಿಕೆಯಿಂದ ದೂರವಿರಲು ಕಾರಣವಾಯಿತೆ,ವಿವಾದ

IND vs ENG: ವೇಗಿ ಆಕಾಶ್ ದೀಪ್ ಕುಟುಂಬದ ಕತೆ ಕೇಳಿದ್ರೆ ಕಣ್ಣೀರೇ ಬರುತ್ತದೆ

IND vs ENG: ಮುಂದಿನ ಪಂದ್ಯಕ್ಕೆ ಈ ಇಬ್ಬರೂ ಕನ್ನಡಿಗರಿಗೆ ಗೇಟ್ ಪಾಸ್

IND vs ENG: ಗೆಲುವಿನ ಬಳಿಕ ಶುಭಮನ್ ಗಿಲ್ ಹೇಳಿದ ಒಂದು ಮಾತು ಇಂಗ್ಲೆಂಡ್ ಭಯ ಹೆಚ್ಚಿಸುತ್ತೆ

ಮುಂದಿನ ಸುದ್ದಿ
Show comments