ಪಾಕಿಸ್ತಾನಕ್ಕೆ ಎರಡು ಪಾಯಿಂಟ್ ನೀಡಿ ಗೆಲುವು ಬಿಟ್ಟುಕೊಡೋದು ನನಗಿಷ್ಟವಿಲ್ಲ: ಸಚಿನ್ ತೆಂಡುಲ್ಕರ್ ಹೇಳಿಕೆ

Webdunia
ಶನಿವಾರ, 23 ಫೆಬ್ರವರಿ 2019 (09:05 IST)
ಮುಂಬೈ: ಪಾಕ್ ವಿರುದ್ಧ ವಿಶ್ವಕಪ್ ಕೂಟದಲ್ಲಿ ಕ್ರಿಕೆಟ್ ಪಂದ್ಯವಾಡಬೇಕೋ ಬೇಡವೋ ಎಂಬ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಆಡಬೇಕು ಎಂದು ಅಭಿಪ್ರಾಯ ಹೊರಹಾಕಿದ್ದಾರೆ.


‘ವೈಯಕ್ತಿಕವಾಗಿ ನಾನು ಪಾಕಿಸ್ತಾನಕ್ಕೆ ಭಾರತ ಆಡದೇ ಎರಡು ಅಂಕಗಳನ್ನು ಬಿಟ್ಟುಕೊಟ್ಟು, ಟೂರ್ನಮೆಂಟ್ ನಲ್ಲಿ ಅವರ ಮುನ್ನಡೆ ಸುಲಭ ಮಾಡುವುದು ಇಷ್ಟವಿಲ್ಲ. ವಿಶ್ವಕಪ್ ನಲ್ಲಿ ನಾವು ಯಾವತ್ತೂ ಪಾಕ್ ವಿರುದ್ಧ ಸೋತಿಲ್ಲ. ಈಗ ಮತ್ತೆ ಅವರನ್ನು ಸೋಲಿಸುವ ಸಮಯ ಬಂದಿದೆ. ಆದರೆ ಅಂತಿಮವಾಗಿ ನಮ್ಮ ಸರ್ಕಾರ ಏನು ನಿರ್ಧಾರ ತೆಗೆದುಕೊಳ್ಳುತ್ತದೋ, ಅದರ ಜತೆಗೆ ನಾವಿದ್ದೇವೆ’ ಎಂದು ತೆಂಡುಲ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಆದರೆ ಸಚಿನ್ ಹೇಳಿಕೆಗೆ ವ್ಯಾಪಕ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಕೆಲವರು ಸಚಿನ್ ಹೇಳಿದ್ದು ಸರಿಯಾಗಿಯೇ ಇದೆ ಎಂದು ವಾದಿಸಿದರೆ ಇನ್ನು ಕೆಲವರು ಭಾರತ ರತ್ನ ಪಡೆದ ಕ್ರಿಕೆಟಿಗನಾಗಿ ಸಚಿನ್ ಎರಡು ಅಂಕಗಳನ್ನು ಬಿಟ್ಟುಕೊಡಬೇಕಾಗುತ್ತದೆಂದು ಪಾಕ್ ವಿರುದ್ಧ ಆಡಲು ಹೇಳುವುದು ಸರಿಯಲ್ಲ ಎಂದು ವಾದಿಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಗಾಗಿ ಸೂರ್ಯ ಕುಮಾರ್ ಯಾದವ್ ತಾಯಿ ಪೂಜೆ: ಎಂಥಾ ಅನುಬಂಧ

IND vs AUS T20: ಮಳೆಗೆ ಕೊಚ್ಚಿ ಹೋದ ಮೊದಲ ಟಿ20

IND vs AUS T20: ಟಾಸ್ ಗೆದ್ದ ಆಸ್ಟ್ರೇಲಿಯಾ, ಮತ್ತೆ ಹರ್ಷಿತ್ ರಾಣಾಗೆ ಜೈ ಎಂದ ಗಂಭೀರ್

ರೋಹಿತ್ ಶರ್ಮಾ ಈಗ ವಿಶ್ವ ನಂ 1: ವಯಸ್ಸಾಯ್ತು ಎಂದವರಿಗೆ ತಕ್ಕ ತಿರುಗೇಟು ಕೊಟ್ಟ ಹಿಟ್ ಮ್ಯಾನ್

ಶ್ರೇಯಸ್ ಅಯ್ಯರ್ ನಿಂದ ಸದ್ಯದಲ್ಲೇ ಸಿಗಲಿದೆ ಸರ್ಪೈಸ್: ಬಿಸಿಸಿಐ

ಮುಂದಿನ ಸುದ್ದಿ
Show comments