Webdunia - Bharat's app for daily news and videos

Install App

ಮತ್ತೆ ಸಚಿನ್, ಯುವರಾಜ್ ಭಾರತದ ಪರ ಆಡುವುದನ್ನು ಕಣ್ತುಂಬಿಕೊಳ್ಳುವ ಯೋಗ!

Webdunia
ಭಾನುವಾರ, 7 ಮಾರ್ಚ್ 2021 (08:57 IST)
ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್, ಯುವರಾಜ್ ಸಿಂಗ್, ಇರ್ಫಾನ್ ಪಠಾಣ್ ಮುಂತಾದವರು ಮತ್ತೆ ಮೈದಾನದಲ್ಲಿ ಕ್ರಿಕೆಟ್ ಪಂದ್ಯವಾಡುವುದನ್ನು ನೋಡಲು ಒಂದು ಸುವರ್ಣಾವಕಾಶ ದೊರೆತಿದೆ.


ಮಾರ್ಚ್ 5 ರಿಂದ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ರೋಡ್ ಸೇಫ್ಟೀ ಟೂರ್ನಮೆಂಟ್ ಆರಂಭವಾಗಿದೆ. ಈ ಸರಣಿಯಲ್ಲಿ ಭಾರತ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ದ.ಆಫ್ರಿಕಾ, ಬಾಂಗ್ಲಾದೇಶ, ಶ್ರೀಲಂಕಾ ತಂಡಗಳು ಪಾಲ್ಗೊಂಡಿವೆ.

ವಿಶೇಷವೆಂದರೆ ಎಲ್ಲಾ ತಂಡಗಳಲ್ಲೂ ಹಳೆಯ ದಿಗ್ಗಜ ಕ್ರಿಕೆಟಿಗರು ಆಡುತ್ತಿದ್ದಾರೆ. ಭಾರತ ತಂಡದ ಪರ ಸಚಿನ್, ಸೆಹ್ವಾಗ್, ಯುವರಾಜ್ ರಂತಹ ಜನಪ್ರಿಯ ಆಟಗಾರರು ಆಡುತ್ತಿದ್ದಾರೆ. ಇದು ಕ್ರಿಕೆಟ್ ಪ್ರಿಯರಿಗೆ ರಸದೌತಣ ನೀಡುತ್ತಿದೆ. ಶುಕ್ರವಾರದಿಂದ ಆರಂಭವಾಗಿರುವ ಕೂಟ ಮಾರ್ಚ್ 21 ರವರೆಗೂ ನಡೆಯಲಿದೆ. ಸಂಜೆ 7 ಗಂಟೆಗೆ ಪ್ರತಿನಿತ್ಯ ಕಲರ್ಸ್ ಸಿನಿಪ್ಲೆಕ್ಸ್ ಮತ್ತು ಕಲರ್ಸ್ ರಿಷ್ತೆ ಚಾನೆಲ್ ನಲ್ಲಿ ಪಂದ್ಯದ ನೇರಪ್ರಸಾರವೂ ಇದೆ. ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಸೆಣಸಿದ್ದ ಭಾರತ ತಂಡದ ಪರ ಸಚಿನ್-ಸೆಹ್ವಾಗ್ ಜೋಡಿ ಭರ್ಜರಿ ಬ್ಯಾಟಿಂಗ್ ನಡೆಸಿ ತಂಡಕ್ಕೆ ಗೆಲುವು ಕೊಡಿಸಿದ್ದು ನೋಡಿ ಹಿರಿಯರ ಕ್ರಿಕೆಟ್ ಟೂರ್ನಿಯನ್ನು ಹೀಗೇ ಆಗಾಗ ಆಯೋಜಿಸುತ್ತಿರಿ ಎಂದು ಪ್ರೇಕ್ಷಕರಿಂದ ಒತ್ತಾಯ ಕೇಳಿಬಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾಗಲಕೋಟೆಯ ವಿದ್ಯಾರ್ಥಿನಿಯ ಸಂಕಷ್ಟಕ್ಕೆ ಮಿಡಿದ ಸ್ಟಾರ್ ಕ್ರಿಕೆಟಿಗನ ಹೃದಯ, ಮಾಡಿದ್ದೇನು ಗೊತ್ತಾ

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮೊಹಮ್ಮದ್ ಸಿರಾಜ್ ಯಾರ್ಕರ್ ನಿಂದ ಇವರೆಲ್ಲರ ವೃತ್ತಿ ಜೀವನ ಬಚಾವ್ ಆಯ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

ಮುಂದಿನ ಸುದ್ದಿ
Show comments