Webdunia - Bharat's app for daily news and videos

Install App

ಸಿಟ್ಟಿಗೆದ್ದ ಸೆಹ್ವಾಗ್ ವಿರಾಟ್ ಕೊಹ್ಲಿಗೆ ಹೇಳಿದ್ದೇನು ಗೊತ್ತಾ?!

Webdunia
ಭಾನುವಾರ, 14 ಜನವರಿ 2018 (07:46 IST)
ನವದೆಹಲಿ: ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಆಯ್ಕೆ ಮಾಡಿದ ಪರಿಗೆ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕಿಡಿ ಕಾರಿದ್ದಾರೆ.

ಶಿಖರ್ ಧವನ್ ರನ್ನು ಕಿತ್ತು ಹಾಕಿ ಆ ಸ್ಥಾನಕ್ಕೆ ಕೆಎಲ್ ರಾಹುಲ್ ರನ್ನು ಕರೆತರಲಾಗಿದೆ. ಹಾಗೆಯೇ ಏನೂ ಕಾರಣವಿಲ್ಲದೇ ಉತ್ತಮ ಪ್ರದರ್ಶನದ ಹೊರತಾಗಿಯೂ ಇಶಾಂತ್ ಶರ್ಮಾಗೆ ಅವಕಾಶ ನೀಡಿದ್ದಕ್ಕೆ ಸೆಹ್ವಾಗ್ ಸಿಟ್ಟಿಗೆದ್ದಿದ್ದಾರೆ.

ಒಂದೇ ಪಂದ್ಯದ ಪ್ರದರ್ಶನದ ಆಧಾರದಿಂದ ಕ್ರಿಕೆಟಿಗರನ್ನು ಅಳೆಯುವುದು ಸರಿಯಲ್ಲ ಎಂದು ಧವನ್ ರನ್ನು ಕಿತ್ತು ಹಾಕಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರೆ, ಇನ್ನೊಂದೆಡೆ ಇಶಾಂತ್ ಶರ್ಮಾ ನೀಳಕಾಯದವರು ಎಂಬ ಕಾರಣಕ್ಕೆ ಅವಕಾಶ ನೀಡಿ, ಕಳೆದ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಭುವನೇಶ್ವರ್ ಕುಮಾರ್ ರನ್ನು ಕಿತ್ತು ಹಾಕಿದ್ದಕ್ಕೆ ವೀರೂ ಸಿಟ್ಟಾಗಿದ್ದಾರೆ.

‘ಭುವನೇಶ್ವರ್ ಕುಮಾರ್ ಬದಲಿಗೆ ಬೇರೆ ಯಾವುದಾದರೂ ಆಟಗಾರನನ್ನು ಕಿತ್ತು ಇಶಾಂತ್ ಶರ್ಮಾಗೆ ಅವಕಾಶ ಕೊಡಬಹುದಿತ್ತು. ಅದರ ಬದಲಿಗೆ ಕಳೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರನನ್ನು ಯಾಕೆ ಹೊರಗಿಟ್ಟಿರಿ? ಒಂದು ವೇಳೆ ಈ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದರೆ ಮುಂದಿನ ಪಂದ್ಯದಿಂದ ಕೊಹ್ಲಿ ಹೊರಗಿರಲು ತಯಾರಾಗಿದ್ದಾರಾ?’ ಎಂದು ಸೆಹ್ವಾಗ್ ಖಾರವಾಗಿ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments