ಧೋನಿ ಬಗ್ಗೆ ಶಾಕಿಂಗ್ ವಿವರ ಹೊರಹಾಕಿದ ಪುಸ್ತಕ!

Webdunia
ಮಂಗಳವಾರ, 31 ಅಕ್ಟೋಬರ್ 2017 (10:21 IST)
ಮುಂಬೈ: ಪತ್ರಕರ್ತ ರಾಜ್ ದೀಪ್ ಸರ್ದೇಸಾಯಿ ಬರೆದ ಡೆಮಾಕ್ರಸಿ ಇಲೆವೆನ್ ಟೀಂ ಇಂಡಿಯಾ ಕ್ರಿಕೆಟಿಗ ಎಂಎಸ್ ಧೋನಿ ಬಗ್ಗೆ ಶಾಕಿಂಗ್ ವಿವರವೊಂದನ್ನು ಬಹಿರಂಗಪಡಿಸಿದ್ದಾರೆ.

 
ಭಾರತ ತಂಡದ ಅತ್ಯಂತ ಯಶಸ್ವೀ ನಾಯಕ ಎಂದೇ ಪರಿಗಣಿಸಲ್ಪಟ್ಟ ಧೋನಿಯನ್ನು ಒಮ್ಮೆ ಆಯ್ಕೆಗಾರರು ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿಸಲು ತೀರ್ಮಾನಿಸಿದ್ದರಂತೆ. 2012 ರಲ್ಲಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ವಿರುದ್ಧ ಸಾಲು ಸಾಲು ಸೋಲು ಅನುಭವಿಸಿದ ಬಳಿಕ ಮೊಹಿಂದರ್ ಅಮರನಾಥ್ ನೇತೃತ್ವದ ಆಯ್ಕೆ ಸಮಿತಿ ಧೋನಿಯನ್ನು ನಾಯಕತ್ವದಿಂದ ಕೆಳಗಿಳಿಸಲು ಚಿಂತನೆ ನಡೆಸಿತ್ತಂತೆ.

ಆದರೆ ಆಗ ಬಿಸಿಸಿಐ ಅಧ್ಯಕ್ಷರಾಗಿದ್ದ ಎನ್. ಶ್ರೀನಿವಾಸನ್ ಧೋನಿ ಪದಚ್ಯುತಿಯನ್ನು ತಮ್ಮ ಪ್ರಭಾವ ಬಳಸಿ ತಡೆದರಂತೆ. ವಿಶೇಷವೆಂದರೆ ಶ್ರೀನಿವಾಸನ್ ಮಾಲಿಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಧೋನಿ ನಾಯಕರಾಗಿದ್ದರು. ಅಲ್ಲದೆ, ಧೋನಿ ಮತ್ತು ಶ್ರೀನಿವಾಸನ್ ನಡುವೆ ಆಪ್ತ ಸಂಬಂಧವಿದೆ ಎನ್ನುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಇದನ್ನು ಸ್ವತಃ ಶ್ರೀನಿವಾಸನ್ ಪುಸ್ತಕದಲ್ಲಿ ಹೇಳಿಕೊಂಡಿದ್ದಾರೆ. ನಮಗೆ ಎರಡೆರಡು ವಿಶ್ವಕಪ್ ಗೆದ್ದು ಕೊಟ್ಟ ನಾಯಕನನ್ನು ಕಾಪಾಡಿದರೆ ತಪ್ಪೇನು? ಜನ ಈ ಬಗ್ಗೆ ಏನು ಹೇಳಿದರೂ ತಲೆ ಕೆಡಿಸಿಕೊಳ್ಳಲ್ಲ ಎಂದು ಶ್ರೀನಿವಾಸನ್ ಪುಸ್ತಕದಲ್ಲಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Womens World cup:ತವರಿನಲ್ಲಿ ಇತಿಹಾಸ ನಿರ್ಮಿಸುವ ತವಕದಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಪಡೆ

ಟಿಕೆಟ್ ಎಲ್ಲಿ ಹೋಯ್ತು.. ಮಹಿಳಾ ವಿಶ್ವಕಪ್ ಫೈನಲ್ ಗೆ ಮುನ್ನ ಅಭಿಮಾನಿಗಳಿಂದ ಭಾರೀ ಆಕ್ರೋಶ

ದಬಂಗ್‌ ಡೆಲ್ಲಿ ತಂಡಕ್ಕೆ ಪ್ರೊ ಕಬಡ್ಡಿ ಲೀಗ್‌ ಕಿರೀಟ: ಫೈನಲ್‌ನಲ್ಲಿ ಮುಗ್ಗರಿಸಿದ ಪಟ್ನಾ ಪೈರೇಟ್ಸ್‌

ಕರ್ನಾಟಕ ದತ್ತುಪುತ್ರ ನಾನು.. ಕನ್ನಡ ರಾಜ್ಯೋತ್ಸವಕ್ಕೆ ದಿನೇಶ್ ಕಾರ್ತಿಕ್ ಹೇಳಿದ್ದೇನು Video

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶ್ರೇಯಸ್ ಅಯ್ಯರ್: ಲೇಟೆಸ್ಟ್ ಹೆಲ್ತ್ ಅಪ್ ಡೇಟ್ ಇಲ್ಲಿದೆ

ಮುಂದಿನ ಸುದ್ದಿ
Show comments