ಧೋನಿ ರೀತಿಯಲ್ಲಿಯೇ ಪತ್ರಿಕಾಗೋಷ್ಠಿಯಲ್ಲಿ ಸಿಟ್ಟಿಗೆದ್ದ ವಿರಾಟ್ ಕೊಹ್ಲಿ

Webdunia
ಗುರುವಾರ, 16 ನವೆಂಬರ್ 2017 (08:45 IST)
ಕೋಲ್ಕೊತ್ತಾ: ವಿರಾಟ್ ಕೊಹ್ಲಿ ಎಂತಹಾ ಕೋಪಿಷ್ಠ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಭಾರತ ಮತ್ತು ಶ್ರೀಲಂಕಾ ನಡುವಿನ ಟೆಸ್ಟ್ ಸರಣಿಗೆ ಪೂರ್ವಭಾವಿಯಾಗಿ ನಡೆದ ಸುದ್ದಿಗೋಷ್ಠಿಯಲ್ಲಿ ಕೊಹ್ಲಿ ಸಿಟ್ಟಿಗೆದ್ದಿದ್ದಾರೆ.

 
ಕೊಹ್ಲಿ ಲಂಕಾ ಸರಣಿಯಲ್ಲಿ ಆಡಲ್ಲ. ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ ಎಂದೆಲ್ಲಾ ವರದಿಗಳು ಕೇಳಿಬಂದಿತ್ತು. ಈ ಬಗ್ಗೆ ಪತ್ರಕರ್ತರೊಬ್ಬರು ಕೊಹ್ಲಿ ಬಳಿ ಕೇಳಿದಾಗ ಅವರು ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ.

‘ಯಾಕೆ ನನಗೂ ವಿಶ್ರಾಂತಿ ಬೇಡವೇ? ನನ್ನ ದೇಹಕ್ಕೆ ವಿಶ್ರಾಂತಿ ಬೇಕೆಂದು ನನಗನಿಸಿದಾಗ ಬಿಸಿಸಿಐ ಬಳಿ ನಾನೇ ಕೇಳಿ ಬಿಡುವು ಪಡೆಯುತ್ತೇನೆ. ನನಗೂ ವಿಶ್ರಾಂತಿ ಬೇಕು. ಯಾಕೆ ನಾನೂ ಮನುಷ್ಯನಲ್ಲವೇ? ರೋಬೋಟ್ ಥರಾ ಕಾಣ್ತಿದ್ದೀನಾ? ಬೇಕಿದ್ದರೆ ನನ್ನ ಚರ್ಮ ಸುಲಿದು ರಕ್ತ ಮಾಂಸ ಇದೆಯಾ ಎಂದು ಚೆಕ್ ಮಾಡಿ’ ಎಂದು ಕೊಹ್ಲಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಹಿಂದೊಮ್ಮೆ ಧೋನಿ ಕೂಡಾ ನಾಯಕರಾಗಿದ್ದಾಗ ಪತ್ರಿಕಾಗೋಷ್ಠಿಯಲ್ಲಿ ಇದೇ ರೀತಿ ಸಿಟ್ಟಿಗೆದ್ದಿದ್ದರು. ತಂಡದಲ್ಲಿ ಒಡಕಿದೆಯೇ ಎಂದು ಪ್ರಶ್ನಿಸಿದಾಗ ಧೋನಿ ಇಡೀ ತಂಡವನ್ನೇ ಪೆರೇಡ್ ಮಾಡಬೇಕಾ ಎಂದು ಮರು ಪ್ರಶ್ನಿಸಿದ್ದರು.  ಈಗ ಕೊಹ್ಲಿ ಕೂಡಾ ಧೋನಿ ರೀತಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸಿಟ್ಟಿಗೆದ್ದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಳದಿ ಸಂಭ್ರಮದಲ್ಲಿರುವ ಸ್ಮೃತಿ ಮಂಧಾನಳನ್ನು ಕುಣಿಸಿದ ಟೀಂ ಇಂಡಿಯಾ ಆಟಗಾರ್ತಿಯರು, video

ವಿಶ್ವಕಪ್ ಗೆದ್ದ ಮೈದಾನದಲ್ಲೇ ಸ್ಮೃತಿ ಮಂಧಾನಗೆ ಕನಸಿನಂತೆ ಪ್ರಪೋಸ್ ಮಾಡಿದ ಭಾವೀ ಪತಿ video

ಸಖತ್ ಫನ್ನಿಯಾಗಿ ಎಂಗೇಜ್ ಮೆಂಟ್ ವಿಷ್ಯ ಹೊರಹಾಕಿದ ಸ್ಮೃತಿ ಮಂಧಾನ Video

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಮುಂದಿನ ಸುದ್ದಿ
Show comments