Webdunia - Bharat's app for daily news and videos

Install App

ಕೆಲವರಿಗೆ ಧೋನಿಯನ್ನು ಕಂಡರೆ ಆಗದಂತೆ!

Webdunia
ಶುಕ್ರವಾರ, 10 ನವೆಂಬರ್ 2017 (09:34 IST)
ನವದೆಹಲಿ: ಟೀಂ ಇಂಡಿಯಾದಲ್ಲಿ ವಿಕೆಟ್ ಕೀಪರ್ ಧೋನಿ ನಿವೃತ್ತಿಗೆ ಮಾಜಿ ಕ್ರಿಕೆಟಿಗರು ಒತ್ತಾಯಿಸುತ್ತಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕೋಚ್ ರವಿ ಶಾಸ್ತ್ರಿ ಕೆಲವರು ಧೋನಿಯನ್ನು ಕಂಡರೆ ಆಗದು ಎಂದು ತಿರುಗೇಟು ನೀಡಿದ್ದಾರೆ.

 
‘ಕೆಲವರು ಧೋನಿ ವೃತ್ತಿ ಜೀವನ ಕೊನೆಗೊಳ್ಳುವುದನ್ನೇ ಕಾಯುತ್ತಿದ್ದಾರೆ.  ಧೋನಿ ಒಬ್ಬ ಟೀಂ ಮ್ಯಾನ್. ಅದಕ್ಕೇ ಕೆಲವರಿಗೆ ಅವರನ್ನು ಕಂಡರೆ ಹೊಟ್ಟೆಯುರಿ. ಅವರ ವೃತ್ತಿ ಜೀವನ ಯಾವಾಗ ಕೊನೆಗೊಳ್ಳುತ್ತದೋ ಎಂದು ಕಾಯುತ್ತಿದ್ದಾರೆ’ ಎಂದು ರವಿಶಾಸ್ತ್ರಿ ಟೀಕಾಕಾರರಿಗೆ ಖಾರವಾಗಿ ತಿರುಗೇಟು ನೀಡಿದ್ದಾರೆ.

‘ಕೆಲವರು ಧೋನಿ ಕೆಲವು ಕೆಟ್ಟ ದಿನಗಳನ್ನು ಎದುರಿಸುವುದನ್ನೇ ಕಾಯುತ್ತಿದ್ದಾರೆ. ಆದರೆ ಧೋನಿಯಂತಹ ಶ್ರೇಷ್ಠ ಆಟಗಾರರು ಅವರ ವೃತ್ತಿ ಜೀವನವನ್ನು ಅವರೇ ನಿರ್ಧರಿಸುತ್ತಾರೆ. ಇಂತಹ ಟೀಕೆಗಳೆಲ್ಲಾ ನಮಗೆ ಅನ್ವಯವಾಗುವುದಿಲ್ಲ. ನಮ್ಮ ಧೋನಿ ಎಲ್ಲಿ ಸಲ್ಲಬೇಕು ಎಂದು ನಮಗೆ ಗೊತ್ತಿದೆ’ ಎಂದು ರವಿಶಾಸ್ತ್ರಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಮುಂದಿನ ಸುದ್ದಿ
Show comments