Webdunia - Bharat's app for daily news and videos

Install App

‘ಮದವೇರಿದ ವಿರಾಟ್ ಕೊಹ್ಲಿಗೆ ಮೂಗುದಾರ ಹಾಕುವವರು ತುರ್ತಾಗಿ ಬೇಕಾಗಿದೆ’

Webdunia
ಬುಧವಾರ, 24 ಜನವರಿ 2018 (09:19 IST)
ನವದೆಹಲಿ: ಯಾರ ಮಾತಿಗೂ ಕಿವಿಗೊಡದೆ ಮದವೇರಿದ ಆನೆಯಂತೆ ನಡೆಯುತ್ತಿರುವ ವಿರಾಟ್ ಕೊಹ್ಲಿಗೆ ಬುದ್ಧಿ ಹೇಳುವವರು ಬೇಕಾಗಿದ್ದಾರೆ ಎಂದು ಟೀಂ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಖಡಕ್ ಆಗಿ ಹೇಳಿದ್ದಾರೆ.
 

ಪ್ರಸ್ತುತ ಟೀಂ ಇಂಡಿಯಾ ತಂಡದಲ್ಲಿ ಯಾವೊಬ್ಬ ಆಟಗಾರನೂ ಕೊಹ್ಲಿಗೆ ಎದುರು ನಿಂತು ನೀನು ಮಾಡುತ್ತಿರುವುದು ತಪ್ಪು ಎಂದು ಹೇಳುವ ಧೈರ್ಯವಂತರು ಇಲ್ಲ. ಹಾಗಿರುವ ಒಬ್ಬ ಆಟಗಾರನ ಅಗತ್ಯ ತುರ್ತಾಗಿ ಇದೆ ಎಂದು ಸೆಹ್ವಾಗ್ ಖಾರವಾಗಿ ಹೇಳಿದ್ದಾರೆ.

ದ.ಆಫ್ರಿಕಾ ವಿರುದ್ಧ ಪಂದ್ಯಗಳಿಗೆ ತಂಡದ ಆಯ್ಕೆ ಬಗ್ಗೆ ಈ ಮೊದಲು ಅಸಮಾಧಾನ ವ್ಯಕ್ತಪಡಿಸಿದ್ದ ಸೆಹ್ವಾಗ್ ಇದೀಗ ಮತ್ತೊಮ್ಮೆ ಕೊಹ್ಲಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಎಲ್ಲಾ ತಂಡದಲ್ಲೂ ನಾಯಕನಿಗೆ ಸರಿ ತಪ್ಪು ಹೇಳಲು ನಾಲ್ಕೈದು ಆಟಗಾರರಿರುತ್ತಾರೆ. ಆದರೆ ಹಾಲಿ ಭಾರತ ತಂಡದಲ್ಲಿ ಯಾರೂ ಅಂತಹವರಿಲ್ಲ. ಆತನ ಸಮಕ್ಕೆ ನಿಂತು ನಿರ್ಧಾರಗಳನ್ನು ಪ್ರಶ್ನಿಸುವ ಯಾವ ಆಟಗಾರನೂ ಇಲ್ಲ’ ಎಂದು ವೀರೂ ಟಿವಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments