Webdunia - Bharat's app for daily news and videos

Install App

ಹ್ಯಾಪೀ ಬರ್ತ್ ಡೇ ‘ದಾದ’: ಸೌರವ್ ಗಂಗೂಲಿಯ ಮಾನಸ ಪುತ್ರರಿವರು!

Webdunia
ಬುಧವಾರ, 8 ಜುಲೈ 2020 (10:07 IST)
ಕೋಲ್ಕೊತ್ತಾ: ಬಂಗಾಳದ ಹುಲಿ ಎಂದೇ ಕರೆಯಿಸಿಕೊಳ್ಳುತ್ತಿದ್ದ ಟೀಂ ಇಂಡಿಯಾ ಕ್ರಿಕೆಟ್ ನ ಎವರ್ ಗ್ರೀನ್ ಕ್ಯಾಪ್ಟನ್ ಸೌರವ್ ಗಂಗೂಲಿಗೆ ಇಂದು 48 ವರ್ಷ ಪೂರ್ತಿಯಾಗಿದೆ. ಹುಟ್ಟುಹಬ್ಬದ ಸಂದರ್ಭದಲ್ಲಿ ಗಂಗೂಲಿಗೆ ನಾನಾ ಕಡೆಯಿಂದ ಶುಭಾಷಯ ಹರಿದುಬರುತ್ತಿದೆ.


ನಾಯಕನಾಗಿ ಗಂಗೂಲಿ ಭಾರತ ತಂಡಕ್ಕೆ ಅಮೂಲ್ಯ ಆಟಗಾರರನ್ನು ಕೊಡುಗೆಯಾಗಿ ನೀಡಿದ್ದರು. ಅವರ ನಾಯಕತ್ವದಲ್ಲಿ ಭಾರತ ತಂಡದಲ್ಲಿ ಯುವ, ಪ್ರತಿಭಾವಂತ ಆಟಗಾರರಿಗೆ ಹೆಚ್ಚು ಪ್ರಾಶಸ್ತ್ಯ ನೀಡಲಾಗುತ್ತಿತ್ತು.

ಇದೇ ಕಾರಣಕ್ಕೆ ಭಾರತಕ್ಕೆ ವೀರೇಂದ್ರ ಸೆಹ್ವಾಗ್, ಹರ್ಭಜನ್ ಸಿಂಗ್, ಜಹೀರ್ ಖಾನ್, ಯುವರಾಜ್ ಸಿಂಗ್, ಆಶಿಷ್ ನೆಹ್ರಾ, ಇರ್ಫಾನ್ ಪಠಾಣ್ ಎಂಬ ಘಟಾನುಘಟಿ ಪ್ರತಿಭಾವಂತ ಆಟಗಾರರು ಸಿಕ್ಕಿದ್ದು. ಅನುಭವಿಗಳನ್ನು ಕಡೆಗಣಿಸಿಯಾದರೂ ಸರಿಯೇ ತಮ್ಮದೇ ನೇರ ವ್ಯಕ್ತಿತ್ವ ಹೊಂದಿದ್ದ ಗಂಗೂಲಿಗೆ ಪಾಲಿಗೆ ಇವರೆಲ್ಲಾ ಮಾನಸ ಪುತ್ರರು ಎಂದರೂ ತಪ್ಪಲ್ಲ. ಈಗಲೂ ತಮ್ಮ ಮೆಚ್ಚಿನ ನಾಯಕ ಯಾರು ಎಂದು ಕೇಳಿದರೆ ಈ ಆಟಗಾರರೆಲ್ಲಾ ಗಂಗೂಲಿಯ ಹೆಸರೇ ಹೇಳುತ್ತಾರೆ.

ಯಾಕೆಂದರೆ ಗಂಗೂಲಿ ಈ ಆಟಗಾರರ ಮೂಲಕ ಭಾರತ ತಂಡದ ಭವಿಷ್ಯವನ್ನೇ ಬದಲಾಯಿಸಿದರು. ವೈಫಲ್ಯ, ಮ್ಯಾಚ್ ಫಿಕ್ಸಿಂಗ್ ನ ಸುಳಿಯಲ್ಲಿದ್ದ ಭಾರತೀಯ ಕ್ರಿಕೆಟ್ ಗೆ ತಮ್ಮ ಆಕ್ರಮಣಕಾರಿ ಮನೋಭಾವದ ಮೂಲಕ ಹೊಸ ದಿಕ್ಕು ತೋರಿದವರು. ಇಂತಿಪ್ಪ ದಾದನಿಗೆ ಇಂದು ಹುಟ್ಟುಹಬ್ಬದ ಸಂಭ್ರಮ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments