Webdunia - Bharat's app for daily news and videos

Install App

ಮಳೆಯಿಂದಾಗಿ ಪಂದ್ಯ ರದ್ದಾಗುವುದನ್ನು ತಪ್ಪಿಸಲು ಸೌರವ್ ಗಂಗೂಲಿ ಬಳಿಯಿದೆ ಒಂದು ಉಪಾಯ!

Webdunia
ಶನಿವಾರ, 15 ಜೂನ್ 2019 (09:47 IST)
ಲಂಡನ್: ವಿಶ್ವಕಪ್ ಟೂರ್ನಿಯಲ್ಲಿ ಬಹುತೇಕ ಪಂದ್ಯಗಳು ಮಳೆಯಿಂದಾಗಿ ರದ್ದಾಗುತ್ತಿರುವುದಕ್ಕೆ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಉಪಾಯವೊಂದನ್ನು ಹೇಳಿದ್ದಾರೆ.


ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಗಂಗೂಲಿ ತಮ್ಮ ತವರಿನಲ್ಲಿ ಪಂದ್ಯ ರದ್ದಾಗದಂತೆ ತಡೆಯಲು ಮಾಡಿದ ಉಪಾಯವನ್ನು ಹೇಳಿದ್ದಾರೆ. ಕೋಲ್ಕೊತ್ತಾದ ಈಡನ್ ಗಾರ್ಡನ್ ನಲ್ಲಿ ತಾವು ಬಳಸುತ್ತಿರುವ ಕವರ್ ಇಲ್ಲೂ ಬಳಸಬಹುದು ಎಂದು ಗಂಗೂಲಿ ಉಪಾಯ ಸೂಚಿಸಿದ್ದಾರೆ.

‘ಕೋಲ್ಕೊತ್ತಾದ ಈಡನ್ ಗಾರ್ಡನ್ ನಲ್ಲಿ ನಾವು ಇಂಗ್ಲೆಂಡ್ ನಿಂದಲೇ ಆಮದು ಮಾಡಿಕೊಳ್ಳುವ ಬಿಳಿ ಕವರ್ ಬಳಸುತ್ತೇವೆ. ಅದನ್ನು ಇಡೀ ಗ್ರೌಂಡ್ ಗೆ ಹೊದಿಸಿದರೆ ಮಳೆ ನಿಂತ 10 ನಿಮಿಷದಲ್ಲಿ ಮತ್ತೆ ಪಂದ್ಯ ಶುರು ಮಾಡಲು ಸಾಧ್ಯವಾಗುತ್ತದೆ. ಈ ಕವರ್ ಲೈಟ್ ವೈಟ್ ಆಗಿದ್ದು, ತೆಗೆಯಲೂ ಹೆಚ್ಚು ಜನರು ಬೇಕಾಗಿಲ್ಲ. ಇದನ್ನೇ ಇಲ್ಲಿನ ಮೈದಾನದಲ್ಲಿ ಬಳಸಿ ಪಂದ್ಯ ರದ್ದಾಗದಂತೆ ನೋಡಿಕೊಳ್ಳಬಹುದು’ ಎಂದು ಗಂಗೂಲಿ ವಿವರಿಸಿದ್ದಾರೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದಲ್ಲೂ ಮಳೆ ನಿಂತರೂ ಔಟ್ ಫೀಲ್ಡ್ ಕವರ್ ಆಗದೇ ಒದ್ದೆಯಾಗಿದ್ದರಿಂದ ಪಂದ್ಯ ರದ್ದುಗೊಳಿಸಬೇಕಾಯಿತು. ಹೀಗಾಗಿ ಗಂಗೂಲಿ ಹೇಳಿರುವ ಈ ಉಪಾಯ ಸರಿಯಾಗಿಯೇ ಇದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments