Webdunia - Bharat's app for daily news and videos

Install App

ಧೋನಿಗಾಗಿ ತಮ್ಮ ಕೆರಿಯರ್ ತ್ಯಾಗ ಮಾಡಿದ್ದರಂತೆ ಸೌರವ್ ಗಂಗೂಲಿ

Webdunia
ಸೋಮವಾರ, 9 ಅಕ್ಟೋಬರ್ 2017 (08:30 IST)
ನವದೆಹಲಿ: ಕ್ರಿಕೆಟಿಗ ಧೋನಿಗಾಗಿ ತಾವು ನಾಯಕರಾಗಿದ್ದಾಗ ಸೌರವ್ ಗಂಗೂಲಿ ತಮ್ಮ ಕೆರೆಯರ್ ನ್ನೇ ತ್ಯಾಗ ಮಾಡಿದ್ದರು ಎಂದು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಹೇಳಿಕೊಂಡಿದ್ದಾರೆ.

 
ಧೋನಿ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದು ಗಂಗೂಲಿ ನಾಯಕತ್ವದಲ್ಲಿ. ಗಂಗೂಲಿ ಯಾವತ್ತೂ ಯುವ ಕ್ರಿಕೆಟಿಗರಿಗೆ ಹೆಚ್ಚು ಅವಕಾಶ, ಪ್ರೋತ್ಸಾಹ ಕೊಡುತ್ತಿದ್ದರು. ಧೋನಿ ವಿಚಾರದಲ್ಲು ಹಾಗೆಯೇ ಆಯಿತು.

ಧೋನಿಗಾಗಿ ತಮ್ಮ ಬ್ಯಾಟಿಂಗ್ ಕ್ರಮಾಂಕವನ್ನೇ ಗಂಗೂಲಿ ತ್ಯಾಗ ಮಾಡದೇ ಹೋಗಿದ್ದರೆ ಧೋನಿ ಇಂದು ಈ ಸ್ಥಾನದಲ್ಲಿರುತ್ತಿರಲಿಲ್ಲ ಎಂದು ಸೆಹ್ವಾಗ್ ಹೇಳಿದ್ದಾರೆ. ಆರಂಭದಲ್ಲಿ ಕೊನೆಯ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಬರುತ್ತಿದ್ದ ಧೋನಿ ಹೆಚ್ಚು ಯಶಸ್ಸು ಕಂಡಿರಲಿಲ್ಲ.

‘ಒಮ್ಮೆ ನಾವು ಬ್ಯಾಟಿಂಗ್ ಕ್ರಮಾಂಕದಲ್ಲಿ ಪ್ರಯೋಗ ನಡೆಸುತ್ತಿದ್ದೆವು. ಆ ಸಂದರ್ಭದಲ್ಲಿ ಒಂದು ವೇಳೆ ನಮಗೆ ಉತ್ತಮ ಆರಂಭ ದೊರಕಿದರೆ ಗಂಗೂಲಿ ಮೂರನೇ ಕ್ರಮಾಂಕದಲ್ಲಿ ಬರುವುದು ಇಲ್ಲದಿದ್ದರೆ ಪಿಂಚ್ ಹಿಟ್ಟರ್ ಗಳಾದ ಇರ್ಫಾನ್ ಪಠಾಣ್ ಅಥವಾ ಧೋನಿಯನ್ನು ಬ್ಯಾಟಿಂಗ್ ಗೆ ಇಳಿಸೋಣ ಎಂದು ನಿರ್ಧರಿಸಿದ್ದೆವು. ಅದೇ ರೀತಿ ಗಂಗೂಲಿ ತಮ್ಮ 3 ನೇ ಕ್ರಮಾಂಕವನ್ನು ಧೋನಿಗೆ ಬಿಟ್ಟುಕೊಟ್ಟರು. ಹಾಗಾಗಿಯೇ ಧೋನಿ ಕ್ಲಿಕ್ ಆದರು’ ಎಂದು ಸಂದರ್ಶನವೊಂದರಲ್ಲಿ ಸೆಹ್ವಾಗ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments