Webdunia - Bharat's app for daily news and videos

Install App

ಕೇರಳದ ಪ್ರವಾಹ ಪೀಡಿತರಿಗಾಗಿ ಮಿಡಿಯಿತು ಭಾರತೀಯ ಕ್ರೀಡಾಳುಗಳ ಹೃದಯ

Webdunia
ಭಾನುವಾರ, 19 ಆಗಸ್ಟ್ 2018 (08:47 IST)
ನವದೆಹಲಿ: ಕೇರಳದಲ್ಲಿ ಹಿಂದೆಂದೂ ಕಾಣದ ಪ್ರವಾಹದಿಂದಾಗಿ ಹಲವರು ಪ್ರಾಣ ಕಳೆದುಕೊಂಡಿದ್ದರೆ, ಸಾವಿರಾರು ಕುಟುಂಬಗಳು ನೆಲೆ ಕಳೆದುಕೊಂಡು ಸಂಕಷ್ಟಕ್ಕೀಡಾಗಿದೆ.

ಹೀಗಾಗಿ ಕೇರಳದ ಪ್ರವಾಹ ಸಂತ್ರಸ್ತರಿಗಾಗಿ ಸಿನಿಮಾ, ರಾಜಕೀಯ, ಸಾಮಾಜಿಕ ಸಂಘಗಳ ಸದಸ್ಯರು ನೆರವಿಗೆ ಬರುತ್ತಿದ್ದಾರೆ. ಅವರ ಜತೆಗೆ ಭಾರತದ ಖ್ಯಾತ ಕ್ರೀಡಾಳುಗಳೂ ತಮ್ಮ ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈ ಬಗ್ಗೆ ಟ್ವೀಟ್ ಮಾಡಿದ್ದು, ಕೇರಳದ ಜನತೆ ಆದಷ್ಟು ಸುರಕ್ಷಿತರಾಗಿರಿ. ಅವರ ಸಹಾಯಕ್ಕೆ ಧಾವಿಸುತ್ತಿರುವ ಸೇನೆ, ಎನ್ ಡಿಆರ್ ಎಫ್ ಸಿಬ್ಬಂದಿಗೆ ಧನ್ಯವಾದಗಳು ಎಂದಿದ್ದಾರೆ.

ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡಾ ಟ್ವೀಟ್ ಮಾಡಿದ್ದು, ಕೇರಳದ ಪ್ರವಾಹ ಪೀಡಿತರ ಸುರಕ್ಷತೆಗಾಗಿ ಪ್ರಾರ್ಥಿಸುವೆ ಎಂದಿದ್ದಾರೆ. ಇನ್ನು ಇನ್ನೋರ್ವ ಕ್ರಿಕೆಟಿಗರಾದ ರವಿಚಂದ್ರನ್ ಅಶ್ವಿನ್, ವೀರೇಂದ್ರ ಸೆಹ್ವಾಗ್‍ ಕೂಡಾ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರವಾಹ ಪೀಡಿತರ ಸುರಕ್ಷತೆಗೆ ಪ್ರಾರ್ಥಿಸುವುದರ ಜತೆಗೆ ಸಹಾಯವಾಣಿಗಳ ಸಂಖ್ಯೆಯನ್ನೂ ಪ್ರಕಟಿಸುವ ಮೂಲಕ ತಮ್ಮ ಕೈಲಾದ ರೀತಿಯಲ್ಲಿ ನೆರವಾಗಲು ಪ್ರಯತ್ನಿಸಿದ್ದಾರೆ. ಕ್ರಿಕೆಟಿಗರಾದ ಶಿಖರ್ ಧವನ್, ರೋಹಿತ್ ಶರ್ಮಾ ಮುಂತಾದವರೂ ಸಂತಾಪ ವ್ಯಕ್ತಪಡಿಸಿದ ಟ್ವೀಟ್ ಮಾಡಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments