Publish Date: Sat, 26 Aug 2017 (09:41 IST)
Updated Date: Sat, 26 Aug 2017 (09:43 IST)
ಕೊಲೊಂಬೊ: ಟೀಂ ಇಂಡಿಯಾ ವಿರುದ್ಧ ಸೋತು ಸುಣ್ಣವಾಗಿರುವ ಶ್ರೀಲಂಕಾ ಕ್ರಿಕೆಟ್ ತಂಡಕ್ಕೆ ಮತ್ತೊಂದು ಶಾಕ್ ಸಿಕ್ಕಿದೆ. ಅದು ನಾಯಕ ಉಪುಲ್ ತರಂಗಾ ಮೂಲಕ.
ತಂಡದ ನಿಧಾನಗತಿಯ ಬೌಲಿಂಗ್ ಗೆ ಉಪುಲ್ ತರಂಗಾ ಎರಡು ಪಂದ್ಯದ ನಿಷೇಧ ಶಿಕ್ಷೆಗೆ ಗುರಿಯಾಗಿದ್ದಾರೆ. ತರಂಗಾ ಅನುಪಸ್ಥಿತಿಯಲ್ಲಿ ಮುಂದಿನ ಪಂದ್ಯಗಳಿಗೆ ಚಮರಾ ಕಪುಗೆಡರಾ ನಾಯಕರಾಗಿ ತಂಡವನ್ನು ಮುನ್ನಡೆಸಲಿದ್ದಾರೆ.
ತರಂಗಾ ಅಲಭ್ಯತೆಯ ಕಾರಣದಿಂದ ಟೆಸ್ಟ್ ತಂಡದ ನಾಯಕ ದಿನೇಶ್ ಚಂಡಿಮಾಲ್ ಮತ್ತು ಲಹಿರು ತಿರಿಮನ್ನೆ ಅವರನ್ನು ತಂಡಕ್ಕೆ ಕರೆಸಿಕೊಳ್ಳಲಾಗಿದೆ. ಈಗಾಗಲೇ ಐದು ಪಂದ್ಯಗಳ ಸರಣಿಯಲ್ಲಿ 0-2 ರಿಂದ ಹಿಂದಿರುವ ಲಂಕಾಗೆ ಮುಂದಿನ ಪಂದ್ಯ ಗೆಲ್ಲುವುದು ಅನಿವಾರ್ಯವಾಗಿದೆ.