ಬಿಸಿಸಿಐ ಏನು ದೇವರಿಗಿಂತ ದೊಡ್ಡದಾ? ಸಿಟ್ಟಿಗೆದ್ದ ಶ್ರೀಶಾಂತ್

Webdunia
ಶನಿವಾರ, 12 ಆಗಸ್ಟ್ 2017 (09:50 IST)
ಕೊಚ್ಚಿ: ಕೇರಳ ಮೂಲದ ಕ್ರಿಕೆಟಿಗ ಎಸ್. ಶ್ರೀಶಾಂತ್ ಮೇಲಿನ ನಿಷೇಧ ಶಿಕ್ಷೆ ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ಬಿಸಿಸಿಐಗೆ ಆದೇಶಿಸಿದರೂ ಕ್ಯಾರೇ ಎನ್ನದ ಕ್ರಿಕೆಟ್ ದೊರೆಗಳ ಮೇಲೆ ಸಿಟ್ಟಿಗೆದ್ದಿದ್ದಾರೆ.


ಮ್ಯಾಚ್ ಫಿಕ್ಸಿಂಗ್ ಕಳಂಕದಿಂದ ಮುಕ್ತರಾಗಿರುವ ಶ್ರೀಶಾಂತ್ ಗೆ ಮತ್ತೆ ಕ್ರಿಕೆಟ್ ಆಡಲು ಅವಕಾಶ ನೀಡಬೇಕು ಎಂದು ಹೈಕೋರ್ಟ್ ಆದೇಶಿಸಿತ್ತು. ಆದರೆ ಆಡಲು ಅವಕಾಶ ಮಾಡಿಕೊಡುವ ಬದಲು ನ್ಯಾಯಾಲಯದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಬಿಸಿಸಿಐ ತೀರ್ಮಾನಿಸಿದೆ. ಇದು ಶ್ರೀಶಾಂತ್ ರನ್ನು ಸಿಟ್ಟಿಗೆಬ್ಬಿಸಿದೆ.

ಸರಣಿ ಟ್ವೀಟ್ ಮಾಡಿರುವ ಅವರು ಬಿಸಿಸಿಐ ಎಂದರೆ ದೇವರಿಗಿಂತಲೂ ದೊಡ್ಡದಾ ಎಂದು ಕ್ರುದ್ಧರಾಗಿ ಕೇಳಿದ್ದಾರೆ. ‘ಬಿಸಿಸಿಐ ಭ್ರಷ್ಟಾಚಾರ, ಮ್ಯಾಚ್ ಫಿಕ್ಸಿಂಗ್ ನ್ನು ಎಂದಿಗೂ ಸಹಿಸುವುದಿಲ್ಲ ಎನ್ನುವುದನ್ನು ಒಪ್ಪಿಕೊಳ್ಳೋಣ. ಹಾಗಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮತ್ತೆ ಅವಕಾಶ ಮಾಡಿಕೊಡುತ್ತಿರುವುದೇಕೆ?

ಒಬ್ಬರಿಗೆ ಎಷ್ಟು ಕೆಡುಕು ಮಾಡಬಹುದೋ ಅದಕ್ಕಿಂತ ಹೆಚ್ಚು ಬಿಸಿಸಿಐ ಮಾಡುತ್ತಿದೆ. ನನ್ನ ಅಮಾಯಕತೆ ಮತ್ತೆ ಮತ್ತೆ ಸಾಬೀತಾದ ಮೇಲೂ ಈ ರೀತಿ ದೌರ್ಜನ್ಯವೆಸಗುತ್ತಿರುವುದೇಕೆ? ಎಂದು ಸಿಟ್ಟಿಗೆದ್ದಿರುವ ಶ್ರೀಶಾಂತ್ ಟ್ವಿಟರ್ ನಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ… ಅಭಿನವ್ ಮುಕುಂದ್ ರ ವರ್ಣಬೇಧ ಆರೋಪಕ್ಕೆ ನಾಯಕ ಕೊಹ್ಲಿ ಪ್ರತಿಕ್ರಿಯೆ ಏನು ಗೊತ್ತಾ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ದುಬೈನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು: ವಿಮಾನ ನಿಲ್ದಾಣದಿಂದಲೇ ಹೇಳಿದ್ದೇನು

T20 WC: ಭಾರತ-ವೆಸ್ಟ್ ಇಂಡೀಸ್ ಮುಖಾಮುಖಿಯಲ್ಲಿ ಗೆದ್ದವರು ಸೆಮಿಗೆ, ಸೋತವರು ಮನೆಗೆ

Sri Vs Pak: ಪಂದ್ಯ ಗೆದ್ದರೂ ಸೆಮಿಫೈನಲ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾದ ಪಾಕ್‌, ಇಲ್ಲಿದೆ ಕಾರಣ

T20 World Cup, Sri VS Pak: ನಿರ್ಣಾಯಕ ಪಂದ್ಯಾದಲ್ಲಿ ಮೂರು ಬದಲಾವಣೆ ಮಾಡಿದ ಪಾಕ್‌

Funny Video: ಏನಲೋ.. ಹಿಡಿಯಕ್ಕಾಗಲ್ವಾ...: ಅಪರೂಪಕ್ಕೆ ಬೌಲಿಂಗ್ ಮಾಡಿ ಮಯಾಂಕ್ ಅಗರ್ವಾಲ್ ಗೆ ಬೈದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments