Webdunia - Bharat's app for daily news and videos

Install App

ಬೆಂಚ್ ಕಾಯಿಸುವ ಕೆಎಲ್ ರಾಹುಲ್ ಗೆ ಯಾಕ್ರೀ ಅವಕಾಶ? ಸುನಿಲ್ ಗವಾಸ್ಕರ್ ಕಿಡಿ

Webdunia
ಗುರುವಾರ, 5 ಅಕ್ಟೋಬರ್ 2017 (10:28 IST)
ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಗೆ ಟೀಂ ಇಂಡಿಯಾದಿಂದ ಪ್ರತಿಭಾವಂತ ಬ್ಯಾಟ್ಸ್ ಮನ್ ಅಜಿಂಕ್ಯಾ ರೆಹಾನೆಗೆ ಕೊಕ್ ನೀಡಿರುವುದನ್ನು ಬ್ಯಾಟಿಂಗ್ ದಂತಕತೆ ಸುನಿಲ್ ಗವಾಸ್ಕರ್ ಪ್ರಶ್ನಿಸಿದ್ದಾರೆ.

 
ಶ್ರೀಲಂಕಾ ಏಕದಿನ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಕನ್ನಡಿಗ ಕೆಎಲ್ ರಾಹುಲ್ ರನ್ನು ಆಯ್ಕೆ ಮಾಡಿ ಉತ್ತಮ ಫಾರ್ಮ್ ನಲ್ಲಿದ್ದ ಅಜಿಂಕ್ಯಾ ರೆಹಾನೆಯನ್ನು ಹೊರಗಿಟ್ಟುವ ಕ್ರಮವನ್ನು ಅವರು ಪ್ರಶ್ನಿಸಿದ್ದಾರೆ.

‘ಕಳೆದ ಐದು ಪಂದ್ಯಗಳನ್ನು ಆಡಿರದ ಕೆಎಲ್ ರಾಹುಲ್ ರನ್ನು ಯಾಕೆ ಆರಿಸಿದ್ದೀರಿ? ಸತತ ಅರ್ಧಶತಕ ಭಾರಿಸಿದ ರೆಹಾನೆಯನ್ನು ಯಾಕೆ ಹೊರಗಿಟ್ಟಿದ್ದೀರಿ? ನನಗೆ ಇದರ ಲಾಜಿಕ್ ಅರ್ಥವೇ ಆಗುತ್ತಿಲ್ಲ’ ಎಂದು ಗವಾಸ್ಕರ್ ಕಿಡಿ ಕಾರಿದ್ದಾರೆ.

ಹಿಂದೆಯೂ ಒಮ್ಮೆ ಗವಾಸ್ಕರ್ ಇದೇ ರೀತಿ ಟೀಂ ಇಂಡಿಯಾದಲ್ಲಿ ಗಡ್ಡ, ದಾಡಿ ಬಿಟ್ಟುಕೊಂಡು ಟ್ಯಾಟೂ ಹಾಕಿಕೊಳ್ಳುವ ಸ್ಟೈಲಿಶ್ ಆಟಗಾರರಿಗೆ ಮಾತ್ರ ಸ್ಥಾನ ಸಿಗುತ್ತಿದೆ ಎಂದು ರಾಹುಲ್ ವಿರುದ್ಧ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಟೀಂ ಇಂಡಿಯಾ ಸಹಾಯಕ ಸಿಬ್ಬಂದಿ ವಿಕೆಟ್ ಪತನ: ಗೌತಮ್ ಗಂಭೀರ್ ಆಪ್ತ ರಾಜೀನಾಮೆ

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಮುಂದಿನ ಸುದ್ದಿ
Show comments