ನಟರಾಜನ್ ಗೆ ಪಿತೃತ್ವ ರಜೆ ನೀಡದ ಬಿಸಿಸಿಐ ತಾರತಮ್ಯ!

Webdunia
ಗುರುವಾರ, 24 ಡಿಸೆಂಬರ್ 2020 (09:57 IST)
ಮುಂಬೈ: ಟೀಂ ಇಂಡಿಯಾದಲ್ಲಿ ನಾಯಕನಿಗೊಂದು ರೂಲ್ಸ್, ಇತರ ಆಟಗಾರರಿಗೊಂದು ರೂಲ್ಸ್. ತಾರತಮ್ಯ ಇಲ್ಲಿ ತಾಂಡವವಾಡುತ್ತಿದೆ ಎಂದು ಹಿರಿಯ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಹೇಳಿದ್ದಾರೆ.


ನಾಯಕ ವಿರಾಟ್ ಕೊಹ್ಲಿಗೆ ಪಿತೃತ್ವ ರಜೆ ನೀಡಿರುವ ಬಿಸಿಸಿಐ ಯುವ ವೇಗಿ ನಟರಾಜನ್ ಗೆ ಪಿತೃತ್ವ ರಜೆ ನಿರಾಕರಿಸಿದೆ. ಇಲ್ಲಿ ಬೇರೆ ಬೇರೆ ವ್ಯಕ್ತಿಗಳಿಗೆ ಬೇರೆ ಬೇರೆ ರೂಲ್ಸ್ ಎಂದು ಗವಾಸ್ಕರ್ ಮಾಧ್ಯಮವೊಂದರ ಅಂಕಣದಲ್ಲಿ ಟೀಕಿಸಿದ್ದಾರೆ. ಟಿ ನಟರಾಜನ್ ಈಗಷ್ಟೇ ತಂಡಕ್ಕೆ ಬಂದಿದ್ದಾರೆ. ಹಾಗಾಗಿ ಅವರಿಗೆ ಇದರ ಬಗ್ಗೆ ಅಪಸ್ವರ ಎತ್ತುವ ಹಾಗಿಲ್ಲ. ಐಪಿಎಲ್ ವೇಳೆ ನಟರಾಜನ್ ಹೆಣ್ಣು ಮಗುವಿನ ತಂದೆಯಾಗಿದ್ದರು. ಆದರೆ ದುಬೈನಿಂದಲೇ ಅವರನ್ನು ನೇರವಾಗಿ ಆಸ್ಟ್ರೇಲಿಯಾಗೆ ಕಳುಹಿಸಲಾಗಿತ್ತು. ಹೀಗಾಗಿ ಅವರಿಗೆ ತಮ್ಮ ನವಜಾತ ಮಗುವಿನ ಮುಖವನ್ನು ಜನವರಿಯಲ್ಲಷ್ಟೇ ನೋಡುವ ಭಾಗ್ಯ ಸಿಗಲಿದೆ. ಅಷ್ಟಕ್ಕೂ ಅವರು ಟೆಸ್ಟ್ ತಂಡದಲ್ಲಿ ಆಡುತ್ತಿಲ್ಲ. ಕೇವಲ ನೆಟ್ ಬೌಲರ್ ಆಗಿ ಬಳಸಲಾಗುತ್ತಿದೆ. ಬಿಸಿಸಿಐ ಮನಸ್ಸು ಮಾಡಿದ್ದರೆ ಅವರನ್ನು ತವರಿಗೆ ಕಳುಹಿಸಿ ಮಗುವಿನ ಮುಖ ನೋಡುವ ಅವಕಾಶ ಕೊಡಬಹುದಿತ್ತು. ಆದರೆ ಇಲ್ಲಿ ಒಬ್ಬೊಬ್ಬರಿಗೆ ಒಂದೊಂದು ನಿಯಮ ಎಂದು ಗವಾಸ್ಕರ್ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ಮುಂದಿನ ಸುದ್ದಿ
Show comments