Webdunia - Bharat's app for daily news and videos

Install App

ವರ್ಣಬೇಧದ ವಿರುದ್ಧ ತಿರುಗಿಬಿದ್ದ ಟೀಂ ಇಂಡಿಯಾ ಕ್ರಿಕೆಟಿಗ

Webdunia
ಗುರುವಾರ, 10 ಆಗಸ್ಟ್ 2017 (11:29 IST)
ಮುಂಬೈ: ಟೀಂ  ಇಂಡಿಯಾ ಕ್ರಿಕೆಟಿಗ ಅಭಿನವ್ ಮುಕುಂದ್ ತಮ್ಮ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಬರುವ ವರ್ಣಬೇಧದ ಸಂದೇಶಗಳ ವಿರುದ್ಧ ತಿರುಗಿಬಿದ್ದಿದ್ದಾರೆ.

 
ವರ್ಣಬೇಧದ ಆಧಾರದಲ್ಲಿ ತಾರತಮ್ಯ ಮಾಡುವವರ ವಿರುದ್ಧ ಭಾವನಾತ್ಮಕವಾಗಿ ಸಂದೇಶ ಬರೆದಿದ್ದಾರೆ. ಇದಕ್ಕೆ ಹಲವು ಮೆಚ್ಚುಗೆ ಬಂದಿದೆ. ಮೊದಲ ಟೆಸ್ಟ್ ನಲ್ಲಿ ಆಡಿದ್ದ ಅಭಿನವ್ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆಡಿರಲಿಲ್ಲ. ಇವರ ಮೈ ಬಣ್ಣದ ಕುರಿತಾಗಿ ಕೆಲವರು ಲೇವಡಿ ಮಾಡಿದ್ದಕ್ಕೆ ಮುಕುಂದ್ ಭಾವನಾತ್ಮಕವಾಗಿ ಸಂದೇಶ ಬರೆದಿದ್ದಾರೆ.

“ನಾನು ಜಗತ್ತಿನ ಹಾಟೆಸ್ಟ್ ನಗರಗಳಲ್ಲಿ ಒಂದಾದ ಚೆನ್ನೈನಿಂದ ಬಂದಿದ್ದೇನೆ. ಸಣ್ಣ ವಯಸ್ಸಿನಿಂದಲೇ ಈ ಬಿಸಿಲಿನಲ್ಲಿ ಬೆವರು ಸುರಿಸಿ ಹಗಲಿರುಳೆನ್ನದೆ ತರಬೇತಿ ಪಡೆದಿದ್ದೇನೆ. ಕೆಲವೊಮ್ಮೆ ನನ್ನ ಮೈ ಬಣ್ಣ ಕಪ್ಪಗಾಗಿದೆಯಲ್ಲಾ ಎಂದು ತಲೆಕೆಡಿಸಿಕೊಂಡಿದ್ದಿದೆ. ಆದರೆ ನಾನು ಇದುವರೆಗೆ ಬಂದ ಹಾದಿಯನ್ನು ಗಮನಿಸಿದಾಗ ನಾನು ಅಷ್ಟು ಕಷ್ಟಪಟ್ಟಿದ್ದಕ್ಕೇ ಇಂದು ಈ ಮಟ್ಟಕ್ಕೆ ಬೆಳೆಯಲು ಸಾಧ್ಯವಾಗಿದೆ ಎಂದು ಮನಗಾಣುತ್ತೇನೆ.

ಹಾಗಾಗಿ ದಯವಿಟ್ಟು ಬಣ್ಣದ ಆಧಾರದಲ್ಲಿ ಅಳೆಯಬೇಡಿ. ಈ ಸಂದೇಶವನ್ನು ನಾನು ಅನುಕಂಪ ಗಿಟ್ಟಿಸಿಕೊಳ್ಳಲು ಬರೆಯುತ್ತಿಲ್ಲ’ ಎಂದು ಮುಕುಂದ್ ಸಂದೇಶದಲ್ಲಿ ಹೇಳಿದ್ದಾರೆ. ಇದೀಗ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

ಇದನ್ನೂ ಓದಿ… ಸೋನಿಯಾ ಗಾಂಧಿಗೆ ಸಚಿವೆ ಸ್ಮೃತಿ ಇರಾನಿ ಲೇವಡಿ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments