Webdunia - Bharat's app for daily news and videos

Install App

ತವರು ತೊರೆಯುವ ಚಿಂತನೆಯಲ್ಲಿ ಟೀಂ ಇಂಡಿಯಾ ಆಟಗಾರ

Webdunia
ಮಂಗಳವಾರ, 7 ಮಾರ್ಚ್ 2017 (10:04 IST)
ಜಮ್ಮು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಿಂದ ಟೀಂ ಇಂಡಿಯಾ ಪ್ರತಿನಿಧಿಸಿದ ಆಟಗಾರರು ಕಡಿಮೆ. ಹಾಗಿದ್ದರೂ, ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಲು ಯಶಸ್ವಿಯಾದ ಪರ್ವೇಜ್ ರಸೂಲ್ ಈಗ ತವರು ರಾಜ್ಯವನ್ನೇ ತೊರೆಯಲು ಚಿಂತನೆ ನಡೆಸಿದ್ದಾರೆ.

 
ಕಾರಣ, ಜಮ್ಮು ಕಾಶ್ಮೀರದಲ್ಲಿ ಕ್ರಿಕೆಟ್ ಅಭ್ಯಾಸ ನಡೆಸಲು ಬೇಕಾದ ಸೌಲಭ್ಯಗಳಿಲ್ಲ. ಹೀಗಾಗಿ ತನ್ನ ಅಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂಬುದು ಕ್ರಿಕೆಟಿಗನ ಅಳಲು.  “ನಾನು ಟೀಂ ಇಂಡಿಯಾಗೆ ಆಯ್ಕೆಯಾದ ಮೇಲಾದರೂ, ಪರಿಸ್ಥಿತಿ ಸುಧಾರಿಸಬಹುದು ಎಂದುಕೊಂಡಿದ್ದೆ. ಆದರೆ ಆಗಲಿಲ್ಲ. ನಮ್ಮಲ್ಲಿ ಪ್ರತಿಭೆಗಳಿವೆ. ಆದರೆ ಅಭ್ಯಾಸ ನಡೆಸಲು ಸಾಕಷ್ಟು ನೆಟ್ ವ್ಯವಸ್ಥೆಯಿಲ್ಲ. ಹೀಗಾದರೆ ನಾನು ತವರು ತೊರೆಯಬೇಕಾಗುತ್ತದೆ” ಎಂದು ರಸೂಲ್ ಹೇಳಿಕೊಂಡಿದ್ದಾರೆ.

ಪರ್ವೇಜ್ ಐಪಿಎಲ್ ಗೆ ಆಯ್ಕೆಯಾದ ಏಕೈಕ ಜಮ್ಮು ಕ್ರಿಕೆಟಿಗ. ಇತ್ತೀಚೆಗೆ ಟೀಂ ಇಂಡಿಯಾ ಸೀಮಿತ ಓವರ್ ಪಂದ್ಯಗಳಲ್ಲೂ ಆಡಿದ್ದರು. ಇಂಗ್ಲೆಂಡ್ ವಿರುದ್ಧದ ಪಂದ್ಯವೊಂದರಲ್ಲಿ ರಾಷ್ಟ್ರಗೀತೆ ಹಾಡುವಾಗ ಚ್ಯುಯಿಂಗ್ ಗಮ್ ಜಗಿದು ಸುದ್ದಿ ಮಾಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments