Select Your Language

Notifications

webdunia
webdunia
webdunia
webdunia

ಅರ್ಜುನ್ ರಣತುಂಗಾ ಹೇಳಿಕೆಗೆ ರೊಚ್ಚಿಗೆದ್ದ ಟೀಂ ಇಂಡಿಯಾ ಆಟಗಾರರು

ಅರ್ಜುನ್ ರಣತುಂಗಾ ಹೇಳಿಕೆಗೆ ರೊಚ್ಚಿಗೆದ್ದ ಟೀಂ ಇಂಡಿಯಾ ಆಟಗಾರರು
NewDelhi , ಶನಿವಾರ, 15 ಜುಲೈ 2017 (10:31 IST)
ನವದೆಹಲಿ: 2011 ರ ವಿಶ್ವಕಪ್ ರ ಭಾರತ-ಶ್ರೀಲಂಕಾ ಫೈನಲ್ ಪಂದ್ಯ ಫಿಕ್ಸ್ ಆಗಿತ್ತೆಂದು ಹೇಳಿಕೆ ನೀಡಿದ್ದ ಶ್ರೀಲಂಕಾದ ಮಾಜಿ ನಾಯಕ ಅರ್ಜುನ್ ರಣತುಂಗಾಗೆ ಟೀಂ ಇಂಡಿಯಾ ಆಟಗಾರರು ತರಾಟೆಗೆ ತೆಗೆದುಕೊಂಡಿದ್ದಾರೆ.

 
ರಣತುಂಗಾ ಅವರ ಹೇಳಿಕೆಗೆ ಅಭಿಮಾನಿಗಳು ಸೇರಿದಂತೆ ಹಲವು ಆಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರು ವರ್ಷಗಳ ನಂತರ ರಣತುಂಗಾಗೆ ಜ್ಞಾನೋದವಾಯಿತೇ ಎಂದು ಅಭಿಮಾನಿಗಳು ಟ್ವಿಟರ್ ನಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಅಭಿಮಾನಿಗಳಲ್ಲದೆ, ಭಾರತ ಕ್ರಿಕೆಟ್ ತಂಡದಲ್ಲಿ ವಿಶ್ವಕಪ್ ಫೈನಲ್ ಪಂದ್ಯವಾಡಿದ್ದ ಗೌತಮ್ ಗಂಭೀರ್, ಆಶಿಷ್ ನೆಹ್ರಾ ಕೂಡಾ ಕಿಡಿ ಕಾರಿದ್ದಾರೆ. ‘ರಣತುಂಗಾರಂತಹ ಅಂತಾರಾಷ್ಟ್ರೀಯ ಮಟ್ಟದಲ್ಲಿ ಜವಾಬ್ದಾರಿಯುತ ಹೇಳಿಕೆ ನೀಡುವಂತಹ ಆಟಗಾರರು ಇಂತಹ ಹೇಳಿಕೆ ನೀಡಿರುವುದು ಅಚ್ಚರಿ ತಂದಿದೆ. ಹಾಗಿದ್ದರೆ ಅವರು ಅದಕ್ಕೆ ಸಾಕ್ಷ್ಯ ಒದಗಿಸಬೇಕು’ ಎಂದು ಗಂಭೀರ್ ಹೇಳಿದ್ದಾರೆ.

ಇನ್ನು ಆಶಿಷ್ ನೆಹ್ರಾ ಇಂತಹ ಕಾಮೆಂಟ್ ಗಳಿಗೆ ಪ್ರತಿಕ್ರಿಯಿಸಿ ಅದನ್ನು ಪ್ರಚುರಪಡಿಸಲು ಇಷ್ಟವಿಲ್ಲ ಎಂದಿದ್ದಾರೆ. ‘ಹಾಗಿದ್ದರೆ 1996 ರಲ್ಲಿ ಅವರ ನಾಯಕತ್ವದಲ್ಲಿ ಲಂಕಾ ವಿಶ್ವಕಪ್ ಗೆದ್ದಾಗ ಪರಿಸ್ಥಿತಿ ಏನಾಗಿತ್ತು? ಇಂತಹ ಅಸಂಬದ್ಧ ಹೇಳಿಕೆಗಳಿಗೆಲ್ಲಾ ಕೊನೆಯಿಲ್ಲ’ ಎಂದು ತಿರಸ್ಕರಿಸಿದ್ದಾರೆ.

ಇದನ್ನೂ ಓದಿ.. ನ್ಯಾನೋ ಕಾರ್ ಗೆ ಸದ್ಯದಲ್ಲೇ ಟಾಟಾ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

2011 ರ ವಿಶ್ವಕಪ್ ಕ್ರಿಕೆಟ್ ಫೈನಲ್ ಮೊದಲೇ ಫಿಕ್ಸ್?