Webdunia - Bharat's app for daily news and videos

Install App

ಸುರೇಶ್ ರೈನಾ ಮೇಲೆ ಕನಿಷ್ಠ ಕೃತಜ್ಞತೆಯೂ ಇಲ್ಲವಾಯಿತೇಕೆ? ಟ್ವಿಟರಿಗರ ಆಕ್ರೋಶ

Webdunia
ಮಂಗಳವಾರ, 1 ಸೆಪ್ಟಂಬರ್ 2020 (10:08 IST)
ಚೆನ್ನೈ: ಐಪಿಎಲ್ ಕೂಟದಿಂದ ವೈಯಕ್ತಿಕ ಕಾರಣ ನೀಡಿ ಹೊರಬಂದಿರುವ ಸುರೇಶ್ ರೈನಾ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ಮಾಲಿಕ ಎನ್ ಶ್ರೀನಿವಾಸನ್ ನೀಡಿದ ಹೇಳಿಕೆ ಟ್ವಿಟರಿಗರ ಆಕ್ರೋಶಕ್ಕೆ ಕಾರಣವಾಗಿದೆ.


ಸುರೇಶ್ ರೈನಾ ಹೋಟೆಲ್ ಕೊಠಡಿ ಬಗ್ಗೆ ಅಸಮಾಧಾನ ಹೊಂದಿದ್ದರು. ಧೋನಿ ಜತೆ ವಿರಸವೇರ್ಪಟ್ಟಿತ್ತು. ಇದಕ್ಕಾಗಿ ಕೂಟದಿಂದ ಹೊರನಡೆದಿದ್ದಾರೆ ಎಂಬಿತ್ಯಾದಿ ಮಾತುಗಳು ಕೇಳಿಬಂದಿತ್ತು. ಅದರ ಬೆನ್ನಲ್ಲೇ ಶ್ರೀನಿವಾಸನ್ ಕೂಡಾ ರೈನಾ ಮೇಲೆ ಕೆಂಡ ಕಾರಿದ್ದು, ನಾವು ಯಾರನ್ನೂ ಹಿಡಿದಿಟ್ಟುಕೊಳ್ಳಲಾಗದು. ಅವರೊಬ್ಬ ಬಂದು ಹೋದ ಅತಿಥಿ ಎಂಬರ್ಥದಲ್ಲಿ ಮಾತನಾಡಿರುವುದು ಅಭಿಮಾನಿಗಳನ್ನು ಕೆರಳಿಸಿದೆ.

12 ವರ್ಷಗಳಿಂದ ನಿಮ್ಮ ತಂಡದ ಪರವಾಗಿ ಆಡುತ್ತಿರುವ ಆಟಗಾರನಿಗೆ ಇಂಥಾ ಮರ್ಯಾದೆಯೇ ನೀಡುವುದು? ರೈನಾ ಮೇಲೆ ಕನಿಷ್ಠ ಕೃತಜ್ಞತೆಯೂ ಇಲ್ಲವಾಯಿತೇ? ಕೇವಲ ಹೋಟೆಲ್ ರೂಂಗಾಗಿ ಅವರು ಧೋನಿ ಜತೆ ಕಿತ್ತಾಡುವರೇ? ರೈನಾ-ಧೋನಿ ಗೆಳೆತನ ಅಷ್ಟು ದರ್ಬಲವೇ ಎಂದು ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments