Publish Date: Mon, 21 Dec 2020 (09:14 IST)
Updated Date: Mon, 21 Dec 2020 (09:16 IST)
ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಕನಿಷ್ಠ ಮೊತ್ತಕ್ಕೆ ಆಲೌಟ್ ಆದ ಬಳಿಕ ಬ್ಯಾಟಿಂಗ್ ಬಗ್ಗೆ ಮಾಜಿ ಕ್ರಿಕೆಟಿಗರಿಂದ ಭಾರೀ ಟೀಕೆ ವ್ಯಕ್ತವಾಗಿದೆ.
ಹಿರಿಯ ಕ್ರಿಕೆಟಿಗ ದಿಲೀಪ್ ವೆಂಗ್ಸರ್ಕಾರ್ ಅಂತೂ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳಿಗೆ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಹೇಗೆ ಆಡಬೇಕೆಂದು ತರಬೇತಿ ನೀಡಲು ರಾಹುಲ್ ದ್ರಾವಿಡ್ ರನ್ನು ಕರೆಸಿಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ. ದ್ರಾವಿಡ್ ರಂತೆ ಅಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ಹೇಗೆ ಬ್ಯಾಟಿಂಗ್ ಮಾಡಬೇಕೆಂದು ಬೇರೆ ಯಾರೂ ತರಬೇತಿ ನೀಡಲು ಸಾಧ್ಯವಿಲ್ಲ. ಅವರು ತಂಡವನ್ನು ಕೂಡಿಕೊಂಡರೆ ತಂಡದ ವಾತಾವರಣ ಹೇಗೆ ಬದಲಾಗುತ್ತದೆ ನೋಡಿ. ಅವರಿಂದ ಮಾತ್ರ ಸದ್ಯ ಟೀಂ ಇಂಡಿಯಾದ ಬ್ಯಾಟ್ಸ್ ಮನ್ ಗಳ ಸ್ಥಿತಿ ಸುಧಾರಿಸಲು ಸಾಧ್ಯ ಎಂದು ವೆಂಗ್ಸರ್ಕಾರ್ ಹೇಳಿದ್ದಾರೆ.