Select Your Language

Notifications

webdunia
webdunia
webdunia
webdunia

ಧರ್ಮಶಾಲಾ ಪತ್ರಿಕಾಗೋಷ್ಠಿಯಲ್ಲಿ ವಿರಾಟ್ ಕೊಹ್ಲಿ ಕೊಟ್ಟ ಶಾಕ್ ಏನು?

ಧರ್ಮಶಾಲಾ ಪತ್ರಿಕಾಗೋಷ್ಠಿಯಲ್ಲಿ ವಿರಾಟ್ ಕೊಹ್ಲಿ ಕೊಟ್ಟ ಶಾಕ್ ಏನು?
Dharmashala , ಶುಕ್ರವಾರ, 24 ಮಾರ್ಚ್ 2017 (13:21 IST)
ಧರ್ಮಶಾಲಾ: ಭುಜದ ನೋವಿನಿಂದ ಬಳಲುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ನಾಳೆಯಿಂದ ಆರಂಭವಾಗುವ ನಾಲ್ಕನೇ ಟೆಸ್ಟ್ ಆಡುವುದು ಅನುಮಾನವಾಗಿದೆ. ಈ ಬಗ್ಗೆ ಸ್ವತಃ ಕೊಹ್ಲಿ ಧರ್ಮಶಾಲಾದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

 

ಇಂದೂ ಕೂಡಾ ಬ್ಯಾಟಿಂಗ್ ಅಭ್ಯಾಸ ನಡೆಸದ ಕೊಹ್ಲಿ, ತಾವಿನ್ನೂ ಶೇಕಡಾ 100 ರಷ್ಟು ಫಿಟ್ ಆಗಿಲ್ಲ. ಸಂಪೂರ್ಣ ಫಿಟ್ ಆಗಿದ್ದರೆ ಮಾತ್ರ ಕಣಕ್ಕಿಳಿಯುವುದಾಗಿ ಕೊಹ್ಲಿ ಹೇಳಿಕೊಂಡಿದ್ದಾರೆ. ಕೊಹ್ಲಿ ಆಡದಿದ್ದರೆ, ಅವರ ಬದಲಿಗೆ ಮುಂಬೈ ಬ್ಯಾಟ್ಸ್ ಮನ್ ಶ್ರೇಯಾಸ್ ಐಯರ್ ಗೆ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ.

 
‘ನಾನು ಸ್ಪೆಷಲ್ ಆಟಗಾರ ಅಲ್ಲ. ಎಲ್ಲಾ ಆಟಗಾರರಿಗೆ ಅನ್ವಯಿಸುವ ನಿಯಮವೇ ನನಗೂ ಅನ್ವಯಿಸುತ್ತದೆ. ನನ್ನ ಹೊರತಾಗಿಯೂ ತಂಡ ಉತ್ತಮ ಪ್ರದರ್ಶನ ನೀಡಿದೆ. ಹೀಗಾಗಿ ನಾನು ಆಡದಿದ್ದರೆ ತಂಡದ ಮೇಲೆ ಯಾವುದೇ ಪರಿಣಾಮ ಬೀರದು’ ಎಂದು ಕೊಹ್ಲಿ ಹೇಳಿದ್ದಾರೆ. ಕೊಹ್ಲಿ ಆಡದಿದ್ದರೆ, ಅಜಿಂಕ್ಯಾ ರೆಹಾನೆ ಭಾರತ ತಂಡದ ನೇತೃತ್ವ ವಹಿಸಲಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

Share this Story:

Follow Webdunia kannada

ಮುಂದಿನ ಸುದ್ದಿ

ನಿವೃತ್ತಿ ಬಗ್ಗೆ ಸ್ವತಃ ಧೋನಿ ಹೇಳಿದ ಮಾತೇನು?