Webdunia - Bharat's app for daily news and videos

Install App

ಧರ್ಮಶಾಲಾ ಪತ್ರಿಕಾಗೋಷ್ಠಿಯಲ್ಲಿ ವಿರಾಟ್ ಕೊಹ್ಲಿ ಕೊಟ್ಟ ಶಾಕ್ ಏನು?

Webdunia
ಶುಕ್ರವಾರ, 24 ಮಾರ್ಚ್ 2017 (13:21 IST)
ಧರ್ಮಶಾಲಾ: ಭುಜದ ನೋವಿನಿಂದ ಬಳಲುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ನಾಳೆಯಿಂದ ಆರಂಭವಾಗುವ ನಾಲ್ಕನೇ ಟೆಸ್ಟ್ ಆಡುವುದು ಅನುಮಾನವಾಗಿದೆ. ಈ ಬಗ್ಗೆ ಸ್ವತಃ ಕೊಹ್ಲಿ ಧರ್ಮಶಾಲಾದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

 

ಇಂದೂ ಕೂಡಾ ಬ್ಯಾಟಿಂಗ್ ಅಭ್ಯಾಸ ನಡೆಸದ ಕೊಹ್ಲಿ, ತಾವಿನ್ನೂ ಶೇಕಡಾ 100 ರಷ್ಟು ಫಿಟ್ ಆಗಿಲ್ಲ. ಸಂಪೂರ್ಣ ಫಿಟ್ ಆಗಿದ್ದರೆ ಮಾತ್ರ ಕಣಕ್ಕಿಳಿಯುವುದಾಗಿ ಕೊಹ್ಲಿ ಹೇಳಿಕೊಂಡಿದ್ದಾರೆ. ಕೊಹ್ಲಿ ಆಡದಿದ್ದರೆ, ಅವರ ಬದಲಿಗೆ ಮುಂಬೈ ಬ್ಯಾಟ್ಸ್ ಮನ್ ಶ್ರೇಯಾಸ್ ಐಯರ್ ಗೆ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ.

 
‘ನಾನು ಸ್ಪೆಷಲ್ ಆಟಗಾರ ಅಲ್ಲ. ಎಲ್ಲಾ ಆಟಗಾರರಿಗೆ ಅನ್ವಯಿಸುವ ನಿಯಮವೇ ನನಗೂ ಅನ್ವಯಿಸುತ್ತದೆ. ನನ್ನ ಹೊರತಾಗಿಯೂ ತಂಡ ಉತ್ತಮ ಪ್ರದರ್ಶನ ನೀಡಿದೆ. ಹೀಗಾಗಿ ನಾನು ಆಡದಿದ್ದರೆ ತಂಡದ ಮೇಲೆ ಯಾವುದೇ ಪರಿಣಾಮ ಬೀರದು’ ಎಂದು ಕೊಹ್ಲಿ ಹೇಳಿದ್ದಾರೆ. ಕೊಹ್ಲಿ ಆಡದಿದ್ದರೆ, ಅಜಿಂಕ್ಯಾ ರೆಹಾನೆ ಭಾರತ ತಂಡದ ನೇತೃತ್ವ ವಹಿಸಲಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments