Webdunia - Bharat's app for daily news and videos

Install App

ರಾಂಚಿ ಸೋಲಿನ ಬಳಿಕ ಬ್ಯಾಟಿಂಗ್ ಬಗ್ಗೆ ಸೀರಿಯಸ್ ಆದ ವಿರಾಟ್ ಕೊಹ್ಲಿ

Webdunia
ಭಾನುವಾರ, 10 ಮಾರ್ಚ್ 2019 (09:04 IST)
ರಾಂಚಿ: ಆಸ್ಟ್ರೇಲಿಯಾ ವಿರುದ್ಧ ರಾಂಚಿಯಲ್ಲಿ ನಡೆದ ಏಕದಿನ ಪಂದ್ಯದ ಸೋಲಿನ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ತಂಡದ ಬ್ಯಾಟಿಂಗ್ ವೈಫಲ್ಯದ ಬಗ್ಗೆ ಗಂಭೀರವಾಗಿ ಯೋಚನೆ ಮಾಡಲಾರಂಭಿಸಿದ್ದಾರೆ.


ಮುಂದಿನ ಎರಡು ಪಂದ್ಯಗಳಲ್ಲಿ ತಮ್ಮ ಗಮನ ತಂಡದ ಬ್ಯಾಟಿಂಗ್ ಸುಧಾರಣೆಯೇ ಆಗಿರುತ್ತದೆ ಎಂದು ಕೊಹ್ಲಿ ಪಂದ್ಯದ ನಂತರ ಹೇಳಿಕೊಂಡಿದ್ದಾರೆ.

ಈಗಾಗಲೇ ಟಿ20 ಸರಣಿಯನ್ನು ಬ್ಯಾಟಿಂಗ್ ವೈಫಲ್ಯದಿಂದಾಗಿಯೇ ಕೊಹ್ಲಿ ಪಡೆ ಕಳೆದುಕೊಂಡಿತ್ತು. ಇದೀಗ ಮತ್ತೆ ಏಕದಿನ ಸರಣಿಯಲ್ಲೂ ಬ್ಯಾಟ್ಸ್ ಮನ್ ಗಳು ರನ್ ಗಳಿಸಲು ಎಡವುತ್ತಿರುವುದು ಮುಂಬರುವ ವಿಶ್ವಕಪ್ ದೃಷ್ಟಿಯಿಂದ ಭಾರತಕ್ಕೆ ಚಿಂತೆಯ ವಿಷಯವಾಗಿದೆ. ಕೇವಲ 300 ರ ಗಡಿ ದಾಟಲು ಹೆಣಗಾಡುತ್ತಿರುವುದು ನಿಜಕ್ಕೂ ಯೋಚಿಸಬೇಕಾದ ವಿಚಾರವೇ.

ಅದರಲ್ಲೂ ವಿಶೇಷವಾಗಿ ಆರಂಭಿಕರು ಮತ್ತು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ಸ್ ಮನ್ ಗಳು ವಿಫಲರಾಗುತ್ತಿರುವುದು ತಂಡಕ್ಕೆ ದುಬಾರಿಯಾಗಿ ಪರಿಣಮಿಸಿದೆ. ಹೀಗಾಗಿ ಈ ಹುಳುಕುಗಳನ್ನು ತಕ್ಷಣವೇ ಸರಿಪಡಿಸುವ ಬಗ್ಗೆ ಕೆಲಸ ಮಾಡುತ್ತೇವೆ ಎಂದು ಕೊಹ್ಲಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments