Webdunia - Bharat's app for daily news and videos

Install App

ಮ್ಯಾಚ್ ಫಿಕ್ಸಿಂಗ್ ಬಗ್ಗೆ ಧೋನಿ ಹೇಳಿದ್ದೇನು?

Webdunia
ಶುಕ್ರವಾರ, 27 ಅಕ್ಟೋಬರ್ 2017 (10:00 IST)
ಚೆನ್ನೈ: ಐಪಿಎಲ್ ನಲ್ಲಿ ಚೆನ್ನೈಸೂಪರ್ ಕಿಂಗ್ಸ್ ತಂಡದ ಮಾಲಿಕ ಎನ್. ಶ್ರೀನಿವಾಸನ್ ಅಳಿಯ ಗುರುನಾಥ್ ಮೈಯಪ್ಪನ್ ಪರ ಧೋನಿ ತನಿಖಾ ತಂಡದ ಪರ ಮಾತನಾಡಿದ್ದರು ಎಂಬ ಆರೋಪ ನಿಜವೇ? ಈ ಬಗ್ಗೆ ಧೋನಿ ಏನು ಹೇಳಿದ್ದಾರೆ ಗೊತ್ತಾ?

 
ಗುರುನಾಥ್ ಮೈಯಪ್ಪನ್ ಕೇವಲ ಕ್ರಿಕೆಟ್ ಆಸಕ್ತ ಎಂದು ಧೋನಿ ತನಿಖಾ ತಂಡದ ಎದುರು ಹೇಳಿ ಅವರನ್ನು ರಕ್ಷಿಸಲು ನೋಡಿದ್ದರು ಎಂದು ಆಕ್ಷೇಪ ವ್ಯಕ್ತಪಡಿಸಲಾಗಿತ್ತು. ಆದರೆ ಈ ಬಗ್ಗೆ ರಾಜ್ ದೀಪ್ ಸರ್ದೇಸಾಯಿ ಬರೆದ ‘ಡೆಮಾಕ್ರಸಿ ಇಲೆವನ್’ ಪುಸ್ತಕದಲ್ಲಿ ಧೋನಿ ಪ್ರತಿಕ್ರಿಯಿಸಿದ್ದಾರೆ.

ನಾನು ಆತ ಕ್ರಿಕೆಟ್ ‘ಆಸಕ್ತನಷ್ಟೇ’ ಎಂಬ ಪದ ಬಳಸಿರಲಿಲ್ಲ. ಆದರೆ ಚೆನ್ನೈ ತಂಡದ ಆನ್ ಫೀಲ್ಡ್ ನಿರ್ಧಾರಗಳಲ್ಲಿ, ಅಥವಾ ತಂಡದ ಯಾವುದೇ ನಿರ್ಧಾರಗಳಲ್ಲಿ ಆತನ ಕೈವಾಡವಿರಲಿಲ್ಲ ಎಂದು ಹೇಳಿದ್ದೆನಷ್ಟೇ ಎಂದು ಈ ಪುಸ್ತಕದ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಮ್ಯಾಚ್ ಫಿಕ್ಸಿಂಗ್ ಕಳಂಕದಿಂದಾಗಿ ಚೆನ್ನೈ ತಂಡ ಎರಡು ವರ್ಷ ಐಪಿಎಲ್ ನಿಂದ ನಿಷೇಧಕ್ಕೊಳಗಾಗಿತ್ತು. ಈ ವರ್ಷ ಮತ್ತೆ ಕಣಕ್ಕಿಳಿಯುತ್ತಿದ್ದು, ಧೋನಿ ಮತ್ತೆ  ಚೆನ್ನೈ ತಂಡದ ನೇತೃತ್ವ ವಹಿಸುವ ಸಂಭವವಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

Gautam Gambhir: ಪೆಟ್ರೋಲ್ ಬಂಕ್ ಫೀಲ್ ಬರ್ತಾ ಇದ್ಯಲ್ಲೋ.. ಟ್ರೋಲ್ ಆಯ್ತು ಟೀಂ ಇಂಡಿಯಾ ಹೊಸ ಜೆರ್ಸಿ

Virat Kohli: ಟ್ರೋಫಿ ಗೆದ್ದಾಗ ಕೊಹ್ಲಿಗೆ ಕಣ್ಣೀರು ಬಂತು, ಅಭಿಮಾನಿ ಸತ್ತಾಗ ಬರಲಿಲ್ಲ ಯಾಕೆ

Gautam Gambhir: ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಬಗ್ಗೆ ಗೌತಮ್ ಗಂಭೀರ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments