ಮುಂಬೈ: ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವುದಿಲ್ಲ ಎಂದು ಹಠ ಹಿಡಿದಿರುವ ಬಿಸಿಸಿಐಗೆ ಟೀಂ ಇಂಡಿಯಾ ಕೋಚ್ ಅನಿಲ್ ಕುಂಬ್ಳೆ ಸಂದೇಶವೊಂದನ್ನು ರವಾನಿಸಿದ್ದಾರೆ.
ಟೀಂ ಇಂಡಿಯಾಗೆ 2017 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಬೇಕು ಎಂದು ಮಾಜಿ ಆಟಗಾರರಾದ ರಾಹುಲ್ ದ್ರಾವಿಡ್ ಮತ್ತು ಸಚಿನ್ ತೆಂಡುಲ್ಕರ್ ಅಭಿಪ್ರಾಯ ವ್ಯಕ್ತಪಡಿಸಿದ ಬೆನ್ನಲ್ಲೇ ಕೋಚ್ ಅನಿಲ್ ಕುಂಬ್ಳೆ ಕೂಡಾ ನಮಗೆ ಆಡಲು ಅವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ.
ಚಾಂಪಿಯನ್ಸ್ ಟ್ರೋಫಿ ಆಡಲು ತಂಡ ತಕ್ಷಣವೇ ಘೋಷಿಸಿ ಎಂದು ಬಿಸಿಸಿಐ ಆಡಳಿತಾಧಿಕಾರಿಗಳು ಸೂಚಿಸಿದ ಬೆನ್ನಲ್ಲೇ ಭಾರತದ ಮಾಜಿ ಆಟಗಾರರಿಂದ ಆಡಲು ಅವಕಾಶ ನೀಡಬೇಕು ಎಂಬ ಒತ್ತಾಯ ಕೇಳಿ ಬರುತ್ತಿದೆ.
ಕಳೆದ ಬಾರಿಯ ಚಾಂಪಿಯನ್ ಆಗಿರುವ ಭಾರತ ಈ ಬಾರಿ ಆಡದಿದ್ದರೆ, ಚಾಂಪಿಯನ್ ಪಟ್ಟ ಉಳಿಸಿಕೊಳ್ಳುವ ಅವಕಾಶ ಕಳೆದುಕೊಳ್ಳಲಿದೆ. ಕುಂಬ್ಳೆ ಮಾತ್ರವಲ್ಲದೆ, ತಂಡದ ಪ್ರಮುಖ ಆಟಗಾರರೆಲ್ಲಾ ಆಡಲು ಅವಕಾಶ ನೀಡುವಂತೆ ಬಿಸಿಸಿಐಗೆ ಒತ್ತಾಯಿಸುತ್ತಿದ್ದಾರೆ ಎಂದು ವರದಿಯಾಗಿದೆ. ಒತ್ತಾಯಕ್ಕೆ ಮಣಿದಾದರೂ, ಭಾರತ ಚಾಂಪಿಯನ್ಸ್ ಟ್ರೋಫಿ ಆಡುತ್ತಾ ನೋಡಬೇಕು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ