ಕೋಚ್ ಅನಿಲ್ ಕುಂಬ್ಳೆ ಮೇಲೆ ಬಿಸಿಸಿಐ ಸಿಟ್ಟಿಗೆ ಕಾರಣಗಳೇನು?

Webdunia
ಶುಕ್ರವಾರ, 26 ಮೇ 2017 (09:06 IST)
ಮುಂಬೈ: ಒಂದೆಡೆ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಸಿದ್ಧವಾಗುತ್ತಿದ್ದರೆ, ಇತ್ತ ಬಿಸಿಸಿಐನಲ್ಲಿ ಕೋಚ್ ಅನಿಲ್ ಕುಂಬ್ಳೆ ಸ್ಥಾನಕ್ಕೆ ಹೊಸ ಕೋಚ್ ಹುಡುಕಾಟದಲ್ಲಿ ಚಟುವಟಿಕೆಗಳು ಜೋರಾಗಿವೆ.

 
ಅಷ್ಟಕ್ಕೂ ಬಿಸಿಸಿಐಗೆ ಯಶಸ್ವೀ ಕೋಚ್ ಕುಂಬ್ಳೆ ಮೇಲೆ ಅಸಮಾಧಾನವೇಕೆ? ಅಂತಹದ್ದನ್ನೇನು ಮಾಡಿದರು ಕುಂಬ್ಳೆ? ಭಾರತ ತಂಡವನ್ನು ಯಶಸ್ಸಿನ ಉತ್ತುಂಗಕ್ಕೆ ಕರೆದೊಯ್ದಿದ್ದೇ ತಪ್ಪೇ? ಆದರೆ ಆಟಗಾರರ ಪರ ಧ್ವನಿಯೆತ್ತಿದ ರೀತಿ ಬಿಸಿಸಿಐಗೆ ಇಷ್ಟವಾಗಲಿಲ್ಲ ಎನ್ನಲಾಗುತ್ತಿದೆ.

ಆಟಗಾರರಾಗಿದ್ದ ಕುಂಬ್ಳೆಗೆ ಕ್ರಿಕೆಟಿಗರ ಸಮಸ್ಯೆಗಳ ಅರಿವಿತ್ತು. ಹೀಗಾಗಿ ಅವರು ಏನೇ ಸಮಸ್ಯೆಯಿದ್ದರೂ ತಾವೇ ಮುಂದೆ ನಿಂತು ಬಿಸಿಸಿಐ ಅಧಿಕಾರಿಗಳ ಜತೆ ಚರ್ಚಿಸುತ್ತಿದ್ದರು. ಅದೂ ಸುಪ್ರೀಂಕೋರ್ಟ್ ನಿಂದ ನಿಯೋಜಿತವಾಗಿರುವ ಆಡಳಿತಾಧಿಕಾರಿಗಳನ್ನು ಕುಂಬ್ಳೆ ಸಂಪರ್ಕಿಸುತ್ತಿದ್ದುದು ಪದಾದಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿತ್ತು.

ಇನ್ನು, ಸಂಭಾವನೆ ವಿಚಾರದಲ್ಲಿ ಶೇ. 150 ರಷ್ಟು ಹೆಚ್ಚಳ ಮಾಡಬೇಕೆಂದು ಕುಂಬ್ಳೆ ವಾದಿಸಿದ್ದರು. ಅಲ್ಲದೆ, ಕೋಚ್ ಆಗಿದ್ದ ತಮ್ಮ ಸಂಭಾವನೆಯನ್ನು 8 ಕೋಟಿಗೆ ಏರಿಕೆ ಮಾಡಬೇಕು ಹಾಗೂ ನಾಯಕನಿಗೆ ಹೆಚ್ಚಿನ ಜವಾಬ್ದಾರಿಗಳಿರುವುದರಿಂದ ಆತನ ಸಂಭಾವನೆಯಲ್ಲಿ ಶೇ. 25 ರಷ್ಟು ಹೆಚ್ಚಳ ಮಾಡಬೇಕೆಂದು ಕುಂಬ್ಳೆ ಬೇಡಿಕೆ ಸಲ್ಲಿಸಿದ್ದರು.

ಇದಲ್ಲದೆ, ಕೋಚ್ ಆಗಿದ್ದ ತಮ್ಮನ್ನು ಆಯ್ಕೆ ಸಮಿತಿಯ ಸದಸ್ಯರಲ್ಲಿ ಒಬ್ಬರಾಗಿ ಮಾಡಬೇಕೆಂದು ಕುಂಬ್ಳೆ ಆಗ್ರಹಿಸಿದ್ದರು. ಇದು ಬಿಸಿಸಿಐ ದೊರೆಗಳ ಕೆಂಗಣ್ಣಿಗೆ ಗುರಿಯಾಗಿತ್ತು. ತಮ್ಮ ಅಧಿಕಾರ ಮೀರಿ ವರ್ತಿಸುತ್ತಿದ್ದಾರೆ ಎಂದು ಅವರ ಮೇಲೆ ಸಿಟ್ಟಿಗೆದ್ದಿದೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿ ನಡೆಯುತ್ತಿರುವಾಗಲೇ ಕುಂಬ್ಳೆಗೆ ಮುಜುಗರ ತರುವ ರೀತಿಯಲ್ಲಿ ಬೇರೆ ಕೋಚ್ ಹುದ್ದೆಗೆ  ಅರ್ಜಿ ಆಹ್ವಾನಿಸಲಾಗಿದೆ. ಇನ್ನು ಕುಂಬ್ಳೆಯೇ ಕೋಚ್ ಆಗಿ ಮುಂದುವರಿಯಬೇಕೆಂದು ಬಯಸಿದರೂ, ಹೊಸದಾಗಿ ಅರ್ಜಿ ಸಲ್ಲಿಸಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

ಮುಂದಿನ ಸುದ್ದಿ
Show comments