ಜಡೇಜಾ-ಅಶ್ವಿನ್ ಗೆ ಯಾಕೆ ವಿಶ್ರಾಂತಿ? ವಿರಾಟ್ ಕೊಹ್ಲಿ ಹೇಳಿದ್ದು ಹೀಗೆ!

Webdunia
ಭಾನುವಾರ, 22 ಅಕ್ಟೋಬರ್ 2017 (09:48 IST)
ಮುಂಬೈ: ಟೀಂ ಇಂಡಿಯಾ ಏಕದಿನ ತಂಡಕ್ಕೆ ಹಿರಿಯ ಸ್ಪಿನ್ ಜೋಡಿ ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾರನ್ನು ಕಡೆಗಣಿಸುತ್ತಿರುವುದು ಏಕೆ? ಇದಕ್ಕೆ ಸ್ವತಃ ನಾಯಕ ಕೊಹ್ಲಿ ಉತ್ತರಿಸಿದ್ದಾರೆ.

 
ನ್ಯೂಜಿಲೆಂಡ್ ವಿರುದ್ಧದ ಏಕದಿನ ಪಂದ್ಯಕ್ಕೆ ಮೊದಲು ಮಾತನಾಡಿದ ಅವರು ‘ಮುಂಬರುವ ವಿಶ್ವಕಪ್ ಗೆ ಮೊದಲು ನಮ್ಮ ಬಳಿ ಉತ್ತಮ ಬೌಲಿಂಗ್ ಕಾಂಬಿನೇಷನ್ ಬೇಕು. ಅಶ್ವಿನ್-ಜಡೇಜಾ ಕಳೆದ 6-7 ವರ್ಷಗಳಿಂದ ಕ್ರಿಕೆಟ್ ಆಡುತ್ತಲೇ ಇದ್ದಾರೆ.

ಇದೀಗ ಯುವ ಆಟಗಾರರು ಅವರ ಸ್ಥಾನದಲ್ಲಿ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಇದರಿಂದಾಗಿ ನಮಗೆ ಉತ್ತಮ ಬೌಲಿಂಗ್ ಆಯ್ಕೆ ಸಿಗುತ್ತಿದೆ. ಹೀಗಾಗಿಯೇ ಇವರಿಬ್ಬರನ್ನು ಕಣಕ್ಕಿಳಿಸಲಾಗುತ್ತಿದೆ’ ಎಂದು ಕೊಹ್ಲಿ ಹೇಳಿದ್ದಾರೆ. ಈ ನಡುವೆ ಆರಂಭಿಕರ ಸ್ಥಾನಕ್ಕೆ ಈ ಪಂದ್ಯದಲ್ಲಿ ಶಿಖರ್ ಧವನ್ ತಂಡಕ್ಕೆ ಮರಳಿರುವುದರಿಂದ ರೋಹಿತ್ ಶರ್ಮಾ ಜತೆಗೆ ಅವರೇ ಕಣಕ್ಕಿಳಿಯುತ್ತಾರೆ. ಅಜಿಂಕ್ಯಾ ರೆಹಾನೆ ನಮ್ಮ ಮೂರನೇ ಆಯ್ಕೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಅಭಿಮಾನಿಗಳು ಕರೆದರೂ ಕೇಳದಂತೆ ನಟಿಸಿದ ವೈಭವ್ ಸೂರ್ಯವಂಶಿ Video

Video: ಸೋತಿದ್ದಕ್ಕೆ ಕೋಪ, ತಾಪಗಳಿಲ್ಲ: ಬದಲಾದ್ರಾ ಎಲ್ಎಸ್ ಜಿ ಮಾಲಿಕ ಸಂಜೀವ್ ಗೊಯೆಂಕಾ

IPL 2026: ಇಂದು ಐಪಿಎಲ್ ಅಭಿಮಾನಿಗಳಿಗೆ ಹಬ್ಬ, ಫ್ಯಾನ್ಸ್ ಕಾಯುತ್ತಿದ್ದ ಗಳಿಗೆ ಬಂದೇ ಬಿಡ್ತು

ಲಕ್ನೋ ಸೂಪರ್‌ ಜೈಂಟ್ಸ್‌ ತಂಡವನ್ನು ಮಟ್ಟಹಾಕಿ ಆರ್‌ಸಿಬಿ ಹಿಂದಿಕ್ಕಿದ ರಾಜಸ್ಥಾನ ರಾಯಲ್ಸ್‌

ಮೈದಾನದಲ್ಲೇ ಸಿಗರೇಟು ಸೇದಿದ ಗುಜರಾತ್ ಬೌಲರ್ ಕಗಿಸೊ ರಬಾಡ: ಏನಿದು ವರ್ತನೆ Video

ಮುಂದಿನ ಸುದ್ದಿ
Show comments