Webdunia - Bharat's app for daily news and videos

Install App

ಆಟದಲ್ಲಿ ಸೋಲು ಗೆಲುವು ಸಾಮಾನ್ಯ, ಹಾರ್ದಿಕ್‌ನನ್ನು ಗೇಲಿ ಮಾಡುವುದು ಸರಿಯಲ್ಲ: ಗಂಗೂಲಿ

Sampriya
ಶನಿವಾರ, 6 ಏಪ್ರಿಲ್ 2024 (17:22 IST)
Photo Courtesy X
ಮುಂಬೈ: ಈ ಬಾರಿಯ ಐಪಿಎಲ್‌ ಆವೃತ್ತಿಯಲ್ಲಿ ಸತತ ಸೋಲಿನಿಂದ ಕಂಗೆಟ್ಟ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ಟ್ರೋಲ್‌ ಮಾಡಲಾಗುತ್ತಿದೆ. ಇದರ ಬೆನಲ್ಲೇ  ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಹಾರ್ದಿಕ್ ಪಾಂಡ್ಯ ಪರ ಮಾತನಾಡಿ, ಅಭಿಮಾನಿಗಳು ಅವರನ್ನು ಗೇಲಿ ಮಾಡಬಾರದು ಎಂದು ಹೇಳಿದ್ದಾರೆ.

ಇಂದು ವಾಂಖೆಡೆ ಮೈದಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ತರಬೇತಿ ಅವಧಿಯ ವೇಳೆ ಈ ಕುರಿತು ಪ್ರತಿಕ್ರಿಯಿಸಿದ ಗಂಗೂಲಿ, ಅವರು ಮುಂಬೈ ತಂಡದ ನಾಯಕರಾಗಿ ಹಾರ್ದಿಕ್ ಅವರನ್ನು ಆಯ್ಕೆಮಾಡಿದ್ದು ಅವರ ತಪ್ಪಲ್ಲ. ಆಟದಲ್ಲಿ ಸೋಲು ಗೆಲುವು ಸಾಮಾನ್ಯ. ಅವರನ್ನು ಗೇಲಿ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಇನ್ನೂ ರೋಹಿತ್ ಶರ್ಮಾ ಅವರು ವಿಭಿನ್ನ ಮಟ್ಟದ ನಾಯಕ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಅವರ ನಾಯಕತ್ವ ಭಾರತದ ತಂಡದಲ್ಲೂ ಅತ್ಯುತ್ತಮವಾಗಿದೆ ಎಂದರು.

ಈ ಬಾರಿಯ ಐಪಿಎಲ್‌ ಆವೃತ್ತಿಯ ಮುಂಬೈ ತಂಡಕ್ಕೆ ನಾಯಕನಾಗಿ ಹಾರ್ದಿಕ್ ಪಾಂಡ್ಯ ಅವರನ್ನು ನೇಮಕ ಮಾಡಿತು. ಇದು ರೋಹಿತ್ ಶರ್ಮಾ ಅವರ ಅಭಿಮಾನಿಗಳ ಅಸಮಾಧನಕ್ಕೆ ಕಾರಣವಾಗಿದೆ. ಅದಲ್ಲದೆ ಹಾರ್ದಿಕ್ ಪಾಂಡ್ಯ ಅವರ ನಾಯಕತ್ವದಲ್ಲಿ ಮುಂಬೈ ಹ್ಯಾಟ್ರಿಕ್ ಸೋಲನ್ನು ಅನುಭವಿಸುತ್ತಲೇ ಬಂದಿದೆ.  ಇದು ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ.

ಇನ್ನೂ ಸತತ ಸೋಲಿನಿಂದ ಹೊರ ಬರಲು ಹಾರ್ದಿಕ್ ಪಾಂಡ್ಯ ಗುಜರತ್‌ನ ಸೋಮನಾಥ ದೇವರ ದರ್ಶನವನ್ನು ಮಾಡಿ, ವಿಶೇಷ ಪೂಜೆ ಸಲ್ಲಿಸಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments