Webdunia - Bharat's app for daily news and videos

Install App

ಬರ್ತ್ ಡೇ ದಿನವೇ ದೇಶದ ಕ್ಷಮೆ ಕೇಳಿದ ಯುವರಾಜ್ ಸಿಂಗ್! ಕಾರಣವೇನು ಗೊತ್ತಾ?

Webdunia
ಶನಿವಾರ, 12 ಡಿಸೆಂಬರ್ 2020 (09:23 IST)
ಮುಂಬೈ: 2011 ರ ವಿಶ್ವಕಪ್ ಗೆಲುವಿನ ರೂವಾರಿ ಯುವರಾಜ್ ಸಿಂಗ್ ಗೆ ಇಂದು ಜನ್ಮದಿನದ ಸಂಭ್ರಮ. ಆದರೆ ಬರ್ತ್ ಡೇ ದಿನವೇ ಯುವಿ ಸಾಮಾಜಿಕ ಜಾಲತಾಣದ ಮೂಲಕ ಸುದೀರ್ಘ ಪತ್ರ ಬರೆದು ದೇಶದ ಕ್ಷಮೆ ಕೋರಿದ್ದಾರೆ. ಇದಕ್ಕೆ ಕಾರಣವೇನು ಗೊತ್ತಾ?


ಇದಕ್ಕೆ ಕಾರಣ ಅವರ ತಂದೆ ಯೋಗರಾಜ್ ಸಿಂಗ್ ಮಾಡಿದ ಎಡವಟ್ಟು. ರೈತರ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಯೋಗರಾಜ್ ಸಿಂಗ್ ಇತ್ತೀಚೆಗೆ ಹಿಂದೂಗಳ ಭಾವನೆಗೆ ಧಕ್ಕೆಯಾಗುವಂತಹ ಹೇಳಿಕೆ ನೀಡಿದ್ದರು. ಇದರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಇದೇ ವಿಚಾರವಾಗಿ ಯುವಿ ಕ್ಷಮೆ ಕೋರಿದ್ದಾರೆ. ‘ಇತ್ತೀಚೆಗೆ ಸರ್ಕಾರ ಮತ್ತು ರೈತರ ನಡುವೆ ನಡೆಯುತ್ತಿರುವ ಸಂಘರ್ಷಕ್ಕೆ ಬೇಗನೇ ಪರಿಹಾರ ಸಿಗಲಿ. ರೈತರು ನಮ್ಮ ದೇಶದ ಬೆನ್ನೆಲುಬಾಗಿದ್ದು, ಅವರ ಸಮಸ್ಯೆಗಳು ಶಾಂತಿಯುತವಾಗಿ ಪರಿಹಾರವಾಗಲಿ ಎಂದು ಬಯಸುತ್ತೇನೆ. ಹೆಮ್ಮೆಯ ಭಾರತೀಯನಾಗಿ ಯೋಗರಾಜ್ ಸಿಂಗ್ ಅವರ ಹೇಳಿಕೆ ನನಗೆ ನೋವು ತಂದಿದೆ. ಅವರ ಹೇಳಿಕೆ ಅವರ ವೈಯಕ್ತಿಕವೇ ಹೊರತು, ನನ್ನ ಸಿದ್ಧಾಂತ ಈ ರೀತಿಯಾಗಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ನಾವೆಲ್ಲಾ ಕೊರೋನಾ ಮಹಾಮಾರಿಯ ವಿರುದ್ಧದ ನಮ್ಮ ಹೋರಾಟವನ್ನು ಮುಂದುವರಿಸೋಣ, ಜೈ ಜವಾನ್, ಜೈ ಕಿಸಾನ್, ಜೈ ಹಿಂದ್’ ಎಂದು ಯುವಿ ಸುದೀರ್ಘವಾಗಿ ಬರೆದು ತಂದೆ ಮಾಡಿದ ಎಡವಟ್ಟಿಗೆ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ಮುಂದಿನ ಸುದ್ದಿ
Show comments