ಕೇರಳದಲ್ಲಿ ಮತ್ತೆ 22,000 ಕೇಸ್, ಆದರೂ ನಿರ್ಬಂಧ ಸಡಿಲಿಕೆ!

Webdunia
ಗುರುವಾರ, 5 ಆಗಸ್ಟ್ 2021 (14:53 IST)
ತಿರುವನಂತಪುರಂ(ಆ.05): ಕೇರಳದಲ್ಲಿ ಬುಧವಾರ ಮತ್ತೆ 22414 ಹೊಸ ಕೋವಿಡ್ ಪ್ರಕರಣ ದಾಖಲಾಗಿದ್ದು, 108 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸತತ 7 ದಿನ 20000ಕ್ಕಿಂತ ಹೆಚ್ಚು ಕೇಸ್ ದಾಖಲಾಗಿತ್ತು. ಆದರೆ ಸೋಮವಾರ ಒಂದು ದಿನ ಅದು 13000ಕ್ಕಿಳಿದಿತ್ತಾದರೂ, ಮಂಗಳವಾರ ಮತ್ತೆ 20,000ದ ಗಡಿದಾಟಿತ್ತು.

* ಕೇರಳದಲ್ಲಿ ಬುಧವಾರ ಮತ್ತೆ 22414 ಹೊಸ ಕೋವಿಡ್ ಪ್ರಕರಣ
* ರಾಜ್ಯದಲ್ಲಿ ಸತತ 7 ದಿನ 20000ಕ್ಕಿಂತ ಹೆಚ್ಚು ಕೇಸ್
* ರಾಜ್ಯಾದ್ಯಂತ ಹೇರಲಾಗಿದ್ದ ನಿರ್ಬಂಧಗಳನ್ನು ಮತ್ತಷ್ಟು ಸಡಿಲ
ಬುಧವಾರವೂ ಆ ಬೆಳವಣಿಗೆ ಮುಂದುವರೆದಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 34,71,563ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,76,048ಕ್ಕೆ ತಲುಪಿದೆ. ಈ ನಡುವೆ ರಾಜ್ಯದಲ್ಲಿ ಸೋಂಕು ಏರುಮುಖದಲ್ಲಿದ್ದರೂ, ರಾಜ್ಯ ಸರ್ಕಾರ, ರಾಜ್ಯಾದ್ಯಂತ ಹೇರಲಾಗಿದ್ದ ನಿರ್ಬಂಧಗಳನ್ನು ಮತ್ತಷ್ಟುಸಡಿಲಗೊಳಿಸಿದೆ.
ಬಹುತೇಕ ವಹಿವಾಟು ಮತ್ತು ಪ್ರವಾಸಿ ತಾಣಗಳನ್ನು ವಾರದ 5 ದಿನದ ಬದಲಾಗಿ 6 ದಿನ ತೆರೆಯಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಜೊತೆಗೆ ಅಂಗಡಿ ಮುಂಗಟ್ಟು ತೆರೆಯುವ ಸಮಯವನ್ನು ಬೆಳಗ್ಗೆ 7ರಿಂದ ರಾತ್ರಿ 9ರವರೆಗೆ ವಿಸ್ತರಿಸಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ನೌಕರರ ಮುಖಂಡ, ಹಿರಿಯ ಹೋರಾಟಗಾರ ಅನಂತ ಸುಬ್ಬರಾವ್ ಇನ್ನಿಲ್ಲ

ಅಂಬರೀಶ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರಾ ಕೈ ನಾಯಕ ಶಿವರಾಮೇಗೌಡ: ವೈರಲ್ ಅಡಿಯೋದಲ್ಲಿ ಏನಿದೆ

ಮುಡಾ ಹಗರಃಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಅಜಿತ್ ಪವಾರ್ ಇದ್ದ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ಏನೆಲ್ಲಾ ಆಯ್ತು, ಪೈಲೆಟ್ ಹೇಳಿದ್ದೇನು ಇಲ್ಲಿದೆ ಮಾಹಿತಿ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments