Webdunia - Bharat's app for daily news and videos

Install App

' ನಟ ಅನಂತ್ ನಾಗ್ಗೆ ಪದ್ಮ ಪುರಸ್ಕಾರ'

Webdunia
ಬುಧವಾರ, 14 ಜುಲೈ 2021 (08:16 IST)
ಬೆಂಗಳೂರು( ಜು. 14) :  ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೆಲ ದಿನಗಳ ಹಿಂದೆ ಪದ್ಮಭೂಷಣ, ಪದ್ಮವಿಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳಿಗೆ ಸಾರ್ವಜನಿಕರೇ ತಮ್ಮ ನಡುವೆ ಸಾಧಕರ ಹೆಸರುಗಳನ್ನು ಶಿಫಾರಸು ಮಾಡಬಹುದು ಎಂದು ಹೇಳಿದ್ದರು  ಇದಾದ ಮೇಲೆ ಸಹಜವಾಗಿಯೇ ಹೆಸರುಗಳು ಬರತೊಡಗಿವೆ.

ಕನ್ನಡದ ಹಿರಿಯ ನಟ, ಕಲಾವಿದ  ಅನಂತ್ ನಾಗ್ ಅವರಿಗೆ ಪದ್ಮ ಪುರಸ್ಕಾರ ಪ್ರದಾನ ಮಾಡಬೇಕು ಎಂಬ ಒತ್ತಾಯ  ಕೇಳಿಬಂದಿದೆ.  ಟ್ವಿಟರ್ ನಲ್ಲಿ #
ForPadma ಹ್ಯಾಷ್ ಟ್ಯಾಗ್ ಟ್ರೆಂಡ್ ಆಗಿದೆ.

* ಹಿರಿಯ ನಟ ಅನಂತ್ ನಾಗ್  ಅವರಿಗೆ ಪದ್ಮ ಪುರಸ್ಕಾರ
* ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ
* ಸ್ಯಾಂಡಲ್ವುಡ್ ಕಲಾವಿದರಿಂದ ಬೆಂಬಲ
 ಈ ಕುರಿತು ಟ್ವಿಟರ್ನಲ್ಲಿ  ಎಂಬ ಹ್ಯಾಷ್ಟ್ಯಾಗ್ ಮೂಲಕ ಅಭಿಯಾನವನ್ನೇ ಕೈಗೊಳ್ಳಲಾಗಿದೆ. ನಿರ್ದೇಶಕ ರಿಷಬ್ ಶೆಟ್ಟಿ ಅವರು, 'ಚಿತ್ರರಸಿಕರ ಮನಗೆಲ್ಲುತ್ತಾ ಬಂದಿರುವ ಈ ಅಭಿನಯ ಬ್ರಹ್ಮ ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿಯೊಂದು ಸಲ್ಲಬೇಕಾದದ್ದು ನ್ಯಾಯವೇ ಸರಿ ಎಂದು ಹೇಳಿದ್ದಾರೆ.
ಅನಂತ್ ನಾಗ್ ರಾಜಕಾರಣದ ಹೆಜ್ಜೆ ಗುರುತು, ಸಚಿವರಾಗಿಯೂ ಕೆಲಸ ಮಾಡಿದ್ದರು
ಈ ನಾಡು ಕಂಡ ಅತ್ಯಂತ ಶ್ರೇಷ್ಠ ಕಲಾವಿದರಲ್ಲಿ ಒಬ್ಬರಾದ ಹಿರಿಯ ನಟ, ಶ್ರೀಯುತ ಅನಂತನಾಗ್ ಕೂಡ ಅಂತಹ ಮಹಾನ್ ಪ್ರತಿಭೆಗಳಲ್ಲಿ ಒಬ್ಬರು ಒಬ್ಬ ಚಿತ್ರನಟರಾಗಿ, ಕನ್ನಡ ಭಾಷೆಗೆ, ನಾಡಿಗೆ, ಚಿತ್ರರಂಗಕ್ಕೆ ಇವರು ನೀಡಿರುವ, ನೀಡುತ್ತಲಿರುವ ಕೊಡುಗೆ ಚಿರಸ್ಮರಣೀಯ, ಎಂತಹ ಪಾತ್ರಗಳು, ಆಗಲಿ, ಲೀಲಾಜಾಲವಾಗಿ ಅಭಿನಯಿಸಿ, ಚಿತ್ರರಸಿಕರ ಮನಗೆಲ್ಲುತ್ತಾ ಬಂದಿರುವ ಈ ಅಭಿನಯ ಬ್ರಹ್ಮನಿಗೆ ಪದ್ಮ ಪುರಸ್ಕಾರ ದೊರೆಯಬೇಕು ಎಂದು ಶೆಟ್ಟಿ ಹೇಳಿದ್ದಾರೆ.
ನಾವೆಲ್ಲರೂ ಒಂದುಗೂಡಿ, ನಮ್ಮ ನಾಡಿನ ಪರವಾಗಿ ಅನಂತ್ ನಾಗ್ ಅವರನ್ನು #PeoplesPadma ಗೆ ನಾಮನಿರ್ದೇಶಿಸೋಣ. ಇದಕ್ಕೆ ಸೆಪ್ಟೆಂಬರ್ 15ರ ವರೆಗೂ ಸಮಯವಿದ್ದು, ಅಲ್ಲಿಯವರೆಗೂ #AnanthnagForPadma ಎಂಬ ಹ್ಯಾಶ್ ಟ್ಯಾಗ್ ಬಳಸುವ ಮೂಲಕ ಎಲ್ಲರೂ ಇದಕ್ಕೆ ಬೆಂಬಲ ಸೂಚಿಸೋಣ ಎಂದು ಕೋರಿಕೊಂಡಿದ್ದಾರೆ.
ನಟ ರಕ್ಷಿತ್ ಶೆಟ್ಟಿ ಅವರು ಕೂಡ ಈ ಅಭಿಯಾನಕ್ಕೆ ಕೈ ಜೋಡಿಸಿದ್ದು, 'ಅಪ್ರತಿಮ ನಟನಿಗೆ ಅತ್ಯುನ್ನತ ಪ್ರಶಸ್ತಿಯೊಂದು ಗುಡಿಯ ಮೇಲೆ ಕಲಶವಿಟ್ಟಂತೆ. ಹಿರಿಯ ನಟ ಶ್ರೀ ಅನಂತನಾಗ್ ಅವರಿಗೆ ಪದ್ಮ ಪ್ರಶಸ್ತಿ ಕನ್ನಡಿಗರ ಆಶಯ ಎಂದಿದ್ದಾರೆ. ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಮೇರು ಕಲಾವಿದನ ಸಾಧನೆಗಳನ್ನು ಹಂಚಿಕೊಂಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments