Webdunia - Bharat's app for daily news and videos

Install App

ಗ್ರಾಹಕರಿಗೆ ಮತ್ತೋಂದು ಶಾಕಿಂಗ್ ನ್ಯೂಸ್!

ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಏರಿಕೆ

Webdunia
ಗುರುವಾರ, 1 ಜುಲೈ 2021 (13:22 IST)
ನವದೆಹಲಿ: ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ಜನಸಾಮಾನ್ಯರಿಗೆ ಶಾಕ್ ಕೊಡುತ್ತಲೇ ಇದೆ. ಈಗಾಗಲೇ ಪೆಟ್ರೋಲ್-ಡೀಸೆಲ್ ಬೆಲೆ ಈಗಾಗಲೇ 100 ರೂ.ದಾಟಿದ್ದು, ಜನರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

















ಇದೇ ವೇಳೆ ದಿನಬಳಕೆಯ ವಸ್ತುಗಳು ಸಹ ದುಬಾರಿಯಾಗುತ್ತಿವೆ. ಇಂದಿನಿಂದ ದೇಶಾದ್ಯಂತ 1 ಲೀಟರ್ ಅಮುಲ್ ಹಾಲಿಗೆ 2 ರೂಪಾಯಿ ಏರಿಸಲಾಗಿದೆ. ಹೀಗೆ ಕೇಂದ್ರ ಸರ್ಕಾರವು ಜನಸಾಮಾನ್ಯರಿಗೆ ಒಂದಾದ ನಂತರ ಒಂದು ಬರೆ ಎಳೆಯುತ್ತಲೇ ಇದೆ. ಇಂದು ದಿನನಿತ್ಯ ಬಳಸುವ ಅಗತ್ಯ ವಸ್ತುಗಳಲ್ಲಿ ಒಂದಾದ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಏರಿಸುವ ಮೂಲಕ ಸರ್ಕಾರ ಜನರಿಗೆ ಶಾಕ್ ನೀಡಿದೆ.
ತೈಲ ಮಾರುಕಟ್ಟೆ ಕಂಪನಿಗಳು 14.2 ಕೆ.ಜಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗೆ  25.50 ರೂ. ಏರಿಕೆ ಮಾಡಿವೆ. ಇದರೊಂದಿಗೆ ನವದೆಹಲಿಯಲ್ಲಿ ಗೃಹಬಳಕೆಯ ಸಿಲಿಂಡರ್ ಬೆಲೆ 834.50 ರೂ ಆಗಿದೆ. ನೂತರ ಪರಿಷ್ಕೃತ ದರ ಜುಲೈ 1ರಿಂದ ಅನ್ವಯಯವಾಗಲಿದೆ.
ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿರುವ ಸರ್ಕಾರದ ವಿರುದ್ಧ ಜನತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮುಂಬೈನಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ 834.50 ರೂ. ಇದ್ದರೆ, ಕೊಲ್ಕತ್ತಾದಲ್ಲಿ 835.50 ರೂ. ಇದೆ. ಅದೇ ರೀತಿ ಚೆನ್ನೈನಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ತುಂಬಾ ದುಬಾರಿಯಾಗಿದ್ದು, 850.50 ರೂ.ಗೆ ಏರಿಕೆಯಾಗಿದೆ.
ಇನ್ನು, ಕಮರ್ಷಿಯಲ್ ಸಿಲಿಂಡರ್ ಬೆಲೆಯನ್ನೂ ತೈಲ ಮಾರುಕಟ್ಟೆ ಕಂಪನಿಗಳು ಜಾಸ್ತಿ ಮಾಡಿವೆ. ಪ್ರತಿ ಸಿಲಿಂಡರ್ಗೆ 84 ರೂ. ಏರಿಸಿವೆ.
ಕಳೆದ 6 ತಿಂಗಳಲ್ಲಿ 14.2 ಕೆಜಿಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗೆ 140 ರೂ.ಏರಿಕೆಯಾಗಿದೆ. ಈ ವರ್ಷ ಮೊದಲ ಬಾರಿಗೆ ಫೆಬ್ರವರಿ 4ರಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ಗೆ 25 ರೂಪಾಯಿ ಏರಿಸಲಾಗಿತ್ತು. ಬಳಿಕ ಫೆಬ್ರವರಿ 15ರಂದು 50 ರೂಪಾಯಿ ಏರಿಕೆ ಮಾಡಲಾಗಿತ್ತು. ಫೆಬ್ರವರಿ 25 ಮತ್ತು ಮಾರ್ಚ್ 1ರಂದು ಮತ್ತೆ 25 ರೂ. ಹೆಚ್ಚಿಸಲಾಗಿತ್ತು. ಇದರೊಂದಿಗೆ ಫೆಬ್ರವರಿ ತಿಂಗಳೊಂದರಲ್ಲೇ 3 ಬಾರಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಸಲಾಗಿತ್ತು. ಪ್ರತಿ ಗ್ಯಾಸ್ ಸಿಲಿಂಡರ್ಗೆ 125 ರೂಪಾಯಿ ಏರಿಕೆಯಾದ ಬಳಿಕ, ಏಪ್ರಿಲ್ 1ರಂದು ಪ್ರತೀ ಸಿಲಿಂಡರ್ಗೆ 10 ರೂಪಾಯಿ ಕಡಿತ ಮಾಡಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

ಮುಂದಿನ ಸುದ್ದಿ
Show comments