ಅಸನಿ ಎಪೆಕ್ಟ್– ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯಾ ಭೀತಿ

Ramya kosira
ಶುಕ್ರವಾರ, 13 ಮೇ 2022 (07:18 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ವರುಣನ ಆರ್ಭಟ ಜೋರಿದೆ. ದಿನಕಳೆದಂತೆ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಾಗಿದೆ ಹೀಗಾಗಿ ಆರೋಗ್ಯ ಇಲಾಖೆ ಮೂರು ಖಾಯಿಲೆಗಳ ಬಗ್ಗೆ ಎಚ್ಚರವಹಿಸುವಂತೆ ಸಲಹೆ ನೀಡಿದೆ.

ರಾಜ್ಯದಲ್ಲಿ ಬಿರು ಬೇಸಿಗೆ ಮಧ್ಯೆ ವರುಣನ ಆರ್ಭಟ ಹೆಚ್ಚಾಗಿದೆ ಇದರ ಮಧ್ಯೆ ಮತ್ತೊಂದು ಆತಂಕವೂ ಸೃಷ್ಟಿ ಆಗಿದೆ. ಅದೇ ಸಾಂಕ್ರಾಮಿಕ ರೋಗಗಳ ಹರಡುವ ಭೀತಿ. ಈ ಬಗ್ಗೆ ಈಗಾಗಲೇ ಆರೋಗ್ಯ ಇಲಾಖೆ ಎಚ್ಚರಿವಹಿಸುವಂತೆ ಸಾರ್ವಜನಿಕರಿಗೆ ಸೂಚಿಸಿದೆ. ಮಳೆಗಾಲ ಆರಂಭ ಹಿನ್ನೆಲೆ ಪ್ರಮುಖವಾಗಿ ಡೆಂಗ್ಯೂ, ಚಿಕನ್ ಗುನ್ಯ ಮತ್ತು ಮಲೇರಿಯಾ ಬಗ್ಗೆ ಜನರಿಗೆ ಜಾಗೃತಿ ಮೂಡಿಸುತ್ತಿದ್ದಾರೆ.

ಆರೋಗ್ಯ ಇಲಾಖೆ ಡೆಂಗ್ಯೂ, ಚಿಕನ್ ಗುನ್ಯಾ, ಮಲೇರಿಯಾ ವಿರುದ್ಧ ಮುನ್ನೆಚ್ಚರಿಕಾ ಕ್ರಮಗಳನ್ನ ಬಿಡುಗಡೆ ಮಾಡಿದೆ. ಮನೆ ಮುಂದೆ ನೀರು ನಿಂತುಕೊಳ್ಳದಂತೆ ಸ್ವಚ್ಛತೆ ಕಾಪಾಡಬೇಕು. ನಿಂತ ನೀರು ಸೊಳ್ಳೆಗಳ ಉತ್ಪತ್ತಿ ತಾಣವಾಗದಂತೆ ಕಟ್ಟೆಚ್ಚರ ವಹಿಸಬೇಕು. ನೀರು ಸಂಗ್ರಹಿಸುವ ಡ್ರಮ್‍ಗಳನ್ನು ಮುಚ್ಚಳದಿಂದ ಮುಚ್ಚಿಡಬೇಕು.

ನೀರು ಸಂಗ್ರಹ ತೊಟ್ಟಿ, ಡ್ರಮ್‍ಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಬೇಕು. ಸ್ವಯಂ ರಕ್ಷಣಾ ವಿಧಾನಗಳನ್ನ ಬಳಸಿ. ಸೊಳ್ಳೆ ಪರದೆ ಮತ್ತು ಸೊಳ್ಳೆ ನಿರೋಧಕಗಳನ್ನ ಬಳಸಬೇಕು, ಮಲೇರಿಯಾ ಮತ್ತು ಡೆಂಗ್ಯೂ ಕೇಸ್‍ಗಳ ಸಂಖ್ಯೆ ಹೆಚ್ಚಾಗ್ತಿದ್ದು ತಕ್ಷಣವೇ ಮುನ್ನೆಚ್ಚರಿಕಾ ಕ್ರಮ ವಹಿಸದಿದ್ದರೆ ಅಪಾಯ ಎಂದು ವೈದ್ಯರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೋಸೆಫ್ ವಿಜಯ್ ಸಿಎಂ ಆಗಬಾರದೆಂದು ಡಿಎಂಕೆ ಪ್ರಯತ್ನಿಸಿತ್ತು: ಮಾಣಿಕ್ಕಂ ಠಾಗೋರ್‌

ಕನ್ನಡ ಮಾತಾಡಕ್ಕೆ ಬರುತ್ತೆ, ಬರಿಯೋದು ಕಷ್ಟ: ಒಪ್ಪಿಕೊಂಡು ಶಿಕ್ಷಣ ಸಚಿವ ಮಧು ಬಂಗಾರಪ್ಪ Video

ಭಟ್ಕಳದಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ: ಮತ್ತಿಬ್ಬರು ನಾಪತ್ತೆ

ಕೆಲವೇ ಗಂಟೆಗಳಲ್ಲಿ ವಿಶ್ವಕ್ಕೆ ಗುಡ್‌ನ್ಯೂಸ್‌: ಭಾರತ ಪ್ರವಾಸದಲ್ಲಿರುವ ಮಾರ್ಕೊ ರುಬಿಯೋ ಹೇಳಿದ್ದೇನು

ನೀಟ್ ಮತ್ತೆ ಬರೆಯುವ ಬಗ್ಗೆ ಕೆಲವು ಭಾವನೆಗಳು ಇದ್ದಿರಬಹುದು: ನೀಟ್ ಆಕಾಂಕ್ಷಿ ಸಾವಿಗೆ ಶರಣು‌

ಮುಂದಿನ ಸುದ್ದಿ
Show comments