ಬೆಂಗಳೂರಿನಲ್ಲಿ ಗಣೇಶನ ಕೂರಿಸಲು ಈ ಷರತ್ತುಗಳು ಅನ್ವಯ

Krishnaveni K
ಗುರುವಾರ, 22 ಆಗಸ್ಟ್ 2024 (10:18 IST)
ಬೆಂಗಳೂರು: ಇನ್ನೇನು ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈ ನಡುವೆ ರಾಜ್ಯ ರಾಜಧಾನಿ ಜನತೆಗೆ ಬಿಬಿಎಂಪಿ ಗಣೇಶನ ಕೂರಿಸಲು ಹೊಸ ಷರತ್ತು ವಿಧಿಸಿದೆ.

ಗಣೇಶ ಹಬ್ಬಕ್ಕೆ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಮಾಡಲಾಗುತ್ತದೆ. ಕೊರೋನಾ ಸಂದರ್ಭದಲ್ಲಿ ಮಾತ್ರ ಗಣೇಶನ ಮೂರ್ತಿಯನ್ನು ಸಾರ್ವಜನಿಕವಾಗಿ ಇಡಲು ಕೆಲವೊಂದು ನಿರ್ಬಂಧ ಹೇರಲಾಗಿತ್ತು. ಇದೀಗ ಈ ಬಾರಿ ಬಿಬಿಎಂಪಿ ಕೆಲವೊಂದು ಷರತ್ತುಗಳನ್ನು ವಿಧಿಸಿದೆ.

ಈ ಬಾರಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶನ ಮೂರ್ತಿ ಕೂರಿಸಲು ಅವಕಾಶವಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಗಣೇಶ ಚತುರ್ಥಿ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನಗರ ಪೊಲೀಸರ ಸಹಯೋಗದಲ್ಲಿ ನಡೆದ ಸಭೆಯಲ್ಲಿ ಅವರು ಕೆಲವು ನಿಯಮಗಳನ್ನು ತಿಳಿಸಿದ್ದಾರೆ.

ಈ ಬಾರಿ ಗಣೇಶನ ಮೂರ್ತಿಯನ್ನು ಬೇಕಾಬಿಟ್ಟಿ ಕೂರಿಸುವಂತಿಲ್ಲ. ಗಣೇಶನ ಕೂರಿಸಲು ಅನುಮತಿ ಪಡೆಯಬೇಕು. ಇದಕ್ಕಾಗಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಸೇರಿದಂತೆ ವಿವಿಧ ಅಧಿಕಾರಿಗಳ ಸಮಿತಿ ರಚಿಸಿ ಅಲ್ಲಲ್ಲಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗುವುದು. ಈ ಕೇಂದ್ರದಲ್ಲಿ ಸಾರ್ವಜನಿಕರು ಗಣೇಶನ ಮೂರ್ತಿ ಕೂರಿಸಲು ಅನುಮತಿ ಪಡೆಯಬೇಕು.

ರಸ್ತೆ ಮಧ್ಯದಲ್ಲಿ ಸಂಚಾರಕ್ಕೆ ಅಡ್ಡಿಪಡಿಸುವಂತೆ ಗಣೇಶನ ಮೂರ್ತಿ ಕೂರಿಸುವಂತಿಲ್ಲ. ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಇನ್ನಷ್ಟು ಮಾರ್ಗಸೂಚಿಗಳನ್ನು ಸದ್ಯದಲ್ಲೇ ಹೊರಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಲ್ಫ್‌ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ದಕ್ಷಿಣ ಕನ್ನಡ ಮಂದಿಗೆ 24/7 ಸಹಾಯವಾಣಿ

ದಿಢೀರನೇ ಎಲ್ಲ ಶಾಸಕರಿಗೆ ಡಿನ್ನರ್ ಆಯೋಜಿಸಿ, ಸ್ಫೋಟಕ ಮಾತು ಹೇಳಿದ ಡಿಕೆ ಶಿವಕುಮಾರ್‌

ಕಾಂಗ್ರೆಸ್ಸಿಗೆ ರಾಷ್ಟ್ರದ ಹಿತಾಸಕ್ತಿಗಿಂತ ರಾಜಕೀಯ ಹಿತಾಸಕ್ತಿ ಮುಖ್ಯ: ಸಿ.ಟಿ.ರವಿ ಆಕ್ಷೇಪ

ಇರಾನ್‌ನ ಅಧ್ಯಕ್ಷರ ಕಚೇರಿಯನ್ನೇ ಟಾರ್ಗೆಟ್ ಮಾಡಿದ ಇಸ್ರೇಲ್, ಯುಎಸ್‌

ದುಬೈನಲ್ಲಿ ಸಿಲುಕಿರುವ ಮಹಾರಾಷ್ಟ್ರದ 164 ಪ್ರವಾಸಿಗರ ಬಗ್ಗೆ ಏಕನಾಥ್ ಶಿಂಧೆ ಸ್ಫೋಟಕ ಮಾಹಿತಿ

ಮುಂದಿನ ಸುದ್ದಿ
Show comments